Posts

Showing posts from January, 2009

ನನ್ನ ಗ್ರಾಮ

ನಿತ್ಯ ಹಚ್ಚ ಹಸುರಾಗಿ ಕಂಗೊಳಿಸುವುದೀ ನನ್ನೂರು ತೆನೆ ತುಂಬಿ ನಿಂತ ಗದ್ದೆ, ಬಾಳೆ ತೆಂಗು ಕಂಗಿನ ತೋಟ ಇಕ್ಕೆಲಗಳಲಿ, ಸುತ್ತಲೂ ಹಬ್ಬಿದ ಬೇಲಿ ಹೂಗಳು.. ಇದು ನನ್ನ ಗ್ರಾಮ...ಆಗಿತ್ತು! ದುಡಿದ ರೈತನಿಗೆ ಬೆಳೆಯು ದಕ್ಕದಿರಲು ಹಚ್ಚ ಹೊಲದಲ್ಲಿ ಕೆಂಬಾವುಟ ಹಾರಿಸಿದ್ದರಂತೆ ನಮ್ಮ ಹಿರಿಯರು, ಅಮ್ಮ ಹೇಳಿದ ನನ್ನೂರಿನ ವಿಪ್ಲವದ ನೆನಪು... ಹೋರಾಟ ಮುಂದುವರಿಯಲು ಹೀಗೆ ದಣಿಯು ದಣಿದಿದ್ದ, ಬಡವ ಗೆದ್ದಿದ್ದ ನನ್ನೂರಿನ ಕೆಂಪು ವಿಪ್ಲವವು ಸಮಾನತೆಗೆ ಉಸಿರು ಭೂಮಿ ಹಸುರಾಗಲು ಕೊಂಚ ರಕ್ತವೂ ಚಿಮ್ಮಿತ್ತು, ಅಪ್ಪ ಹೇಳಿದ್ದ ಶಾಂತಿ ನೆಲೆಸಿದ ಈ ಸಮರದ ಜೊತೆಗೆ ಹುತಾತ್ಮರ ಮಂಟಪವೂ ಎದ್ದು ನಿಂತಿತ್ತು. ಇಂದು ಬರಡಾಗಿದೆ ನನ್ನ ಸುಂದರ ಗ್ರಾಮ, ಅಲ್ಲಲ್ಲಿ ಎರಡಂತಸ್ತಿನ ಮಹಲು,ಗೋಪುರ ಹಸಿರನುಳಿಸಲು ಹೋರಾಡಿದ ಜನರೆಲ್ಲಿ? ಅವರೆಂದೋ ಮಣ್ಣು ಪಾಲಾಗಿ, ಅವರ ಮಕ್ಕಳು ಲಾರಿಯಲಿ ತಂದ ಮಣ್ಣನು ಬರಡು ಭೂಮಿಗೆ ಸುರಿದು, ಕೆಂಪು ಇಟ್ಟಿಗೆಯಲಿ ಗೋಡೆ ಕಟ್ಟುತ್ತಿದ್ದಾರೆ...

ನಿರೀಕ್ಷೆಯಲ್ಲಿ...ಹಾಗೇ ಸುಮ್ಮನೆ

ನಾವು ಚಿಕ್ಕವರಿರುವಾಗ ಮಕ್ಕಳೆಲ್ಲರೂ ಸೇರಿ ನೆಲದ ಮೇಲೆ ಎರಡೂ ಕೈಗಳನ್ನಿರಿಸಿ "ಅಟ್ಟಾ ಮುಟ್ಟಾ" ಆಟವಾಡುವಾಗ ಅದರಲ್ಲಿ ಬರುವಂತಹ "ನಿನ್ನ ಗಂಡ ಎಲ್ಲಿಗೆ ಹೋದ? ಕಾಶಿಗೆ ಹೋದ..ಏನು ತಂದ? ಗಿರಿಗಿಟಿ ತಂದ.. ಯಾರಿಗೆ ಕೊಟ್ಟ? ಅರಸನ ಮಗಳಿಗೆ ಕೊಟ್ಟ..."ಎಂದು ಹೇಳಿ ಮುಗಿಸುವಾಗ 'ಏನು ತಂದ? ಯಾರಿಗೆ ಕೊಟ್ಟ ?'ಎಂಬ ಪ್ರಶ್ನೆಗಳು ನನ್ನನ್ನು ಅಷ್ಟೊಂದು ಚಿಂತೆಗೀಡು ಮಾಡಿರಲಿಲ್ಲ. ಹುಂ! ನಿಮಗೂ ಏನೂ ಅರ್ಥವಾಗಿಲ್ಲವೇ? ಹೇಳ್ತೇನೆ ಕೇಳಿ.. ದೂರದ ಊರಿನಿಂದ ಸ್ವಂತ ಮನೆಗೆ ಹಿಂತಿರುಗುವಾಗ ಯಾರಾದರೂ ಬರಿ ಕೈಯಲ್ಲಿ ಹೋಗುತ್ತಾರೆಯೇ? ಇಲ್ಲವಲ್ಲಾ.. ಕನಿಷ್ಠ ಪಕ್ಷ ಮನೆಯವರಿಗೆ ಏನಾದರೂ ವಸ್ತುಗಳನ್ನು ಕೊಂಡುಕೊಳ್ಳುವುದು ವಾಡಿಕೆ. ನಾವು ಕೊಟ್ಟ ವಸ್ತು ಅದೆಷ್ಟೇ ಚಿಕ್ಕದಾಗಿರಲಿ..ಅದನ್ನು ನಮ್ಮ ಆಪ್ತರಿಗೆ ನೀಡುವಾಗ ಅವರ ಮುಖದಲ್ಲಿ ಕಾಣುವ ಸಂತಸ ಅದನ್ನು ನೋಡಿಯೇ ನಮ್ಮ ಮನ ತುಂಬಿ ಬರುತ್ತದೆ. ಅಲ್ಲವೇ? ನಾವು ಚಿಕ್ಕವರಿರುವಾಗ (ನಮ್ಮ ಮನೆಯ ಸುತ್ತ ಮುತ್ತಲೂ ಹೆಚ್ಚಾಗಿ ಗಲ್ಫ್ ಉದ್ಯೋಗಿಗಳ ಮನೆಯಿದೆ) ಪಕ್ಕದ ಮನೆಯವರು ಮಗ ಅಥವಾ ಗಂಡ ಊರಿಗೆ ಬಂದಿದ್ದಾನೆ ಆತ ಬರುವಾಗ ಇದನ್ನೆಲ್ಲಾ ತಂದಿದ್ದಾನೆ ಎಂದು ದೊಡ್ಡ ಪಟ್ಟಿಯೊಂದನ್ನೇ ನಮ್ಮೆದುರಿಡುತ್ತಿದ್ದರು. ಅವರೇನೂ ಹೇಳದಿದ್ದರೂ, ನಿಮ್ಮವರು ಊರಿಗೆ ಬರುವಾಗ ಏನೆಲ್ಲಾ ತಂದಿದ್ದಾರೆ? ಎಂದು ಕೇಳುವುದು ಕೂಡಾ ಇಲ್ಲಿ ಸರ್ವ ಸಾಮಾನ್ಯವಾಗಿತ್ತು. ಇದು ಮಾತ್ರವಲ್ಲದೆ ಯಾರಾದರೂ ದೂರದ ಊರ

ಯಾತ್ರೆ

ಜೀವನದ ಅರ್ಥವನ್ನರಸಿ ಕವಲು ದಾರಿಯ ನಾಲ್ಕು ದಿನಗಳ ಯಾತ್ರೆ ಮುಗಿದಾಗ ಸುಖದ ಸೊನ್ನೆಯ ಜೊತೆಗೆ ಏಕಾಂಗಿ ನಾನು... ಕಳೆದ ಬಾಲ್ಯದ ನೆನಪುಗಳು ಮನದ ಕದ ತಟ್ಟುತಿರಲು ಮರಳಿ ಬಾರದ ನಿನ್ನೆಗಳಿಗೆ ವರ್ತಮಾನದೊಳು ಮರುಗಲೆಂತು? ಯೌವ್ವನದ ಮೆಟ್ಟಿಲಲಿ ಹೆಜ್ಜೆಯಿತ್ತಾಗ ಮಧು ಹೀರಿ ಹಾರುವ ದುಂಬಿಯಂತೆ ಮನದೊಳಗೆ ಹೊಕ್ಕು, ಮುತ್ತನಿಟ್ಟವರು ಮುದುಡಿದಾಗ ತಿಪ್ಪೆಗೆಸೆದರು ಕಸದಂತೆ ಕಳೆದ ನೋವಿಗೆ ತೇಪೆಯನು ಹಚ್ಚಿ, ಸಪ್ತಪದಿ ತುಳಿದಾಗ, ಸಂಸಾರ ಸಾಗರದ ಅಲೆಗಳಿಗೆ ಮರಳ ದಂಡೆಯಾಗಿ ಕಣ್ಣೀರ ಒತ್ತಿ, ನಕ್ಕು ಬಿಟ್ಟಿದ್ದೆ ಮೌನವಾಗಿ ಇಂತು ನನ್ನ ಜೀವನದಿ ಅತಿಥಿಯಾಗಿ ಬಂದವರು, ಕೆಲ ಕಾಲ ನಕ್ಕು, ಮತ್ತೆ ಮಸಿಯೆರಚಿ ಬಂದಣಿಗೆಯಂತೆ ನನ್ನ ರಸ ಹೀರಿ ಚಿಗುರುವಾಗ ಒಣ ವೃಕ್ಷದಂತೆ ನಾ ಧರೆಗುರುಳುತಲಿರುವೆ.

ಸ್ಮಶಾನದತ್ತ...

ಅಲ್ಲೊಬ್ಬ ಮುದುಕ. ವಯಸ್ಸು ಸುಮಾರು ಎಪ್ಪತ್ತೈದು ದಾಟಿದೆ. ನಾಲ್ಕು ಜನ ಮಕ್ಕಳು, ಈ ನಾಲ್ವರಲ್ಲಿ ಒಬ್ಬಳೇ ಮುದ್ದಿನ ಮಗಳು ಪ್ರೀತಿ. ಮದುವೆಯಾಗಿದೆ. ಅಳಿಯನಿಗೆ ಗಲ್ಫ್‌ನಲ್ಲಿ ಉದ್ಯೋಗ, ಸುಖೀ ಕುಟುಂಬ. ಬಾಕಿ ಉಳಿದ ಮೂವರು ಗಂಡು ಮಕ್ಕಳು ಉದ್ಯೋಗ ಗಿಟ್ಟಿಸಿಕೊಂಡು ಮಡದಿ ಮಕ್ಕಳೊಂದಿಗೆ ಸುಖವಾಗಿದ್ದಾರೆ. ಇಂತಿರುವಾಗ ಒಂದು ದಿನ ಈ ಮುದುಕ ಅಸ್ವಸ್ಥನಾಗುತ್ತಾನೆ. ಮನೆಯಲ್ಲಿ ಕಿರಿಯ ಮಗ ಸೊಸೆ ಮೊಮ್ಮಕ್ಕಳಿಗೆ ಗಾಬರಿ. ಅಂತೂ, ಈ ಅಜ್ಜ ಬಡವ ಅಂತಾ ಅಂದುಕೊಂಡರೆ ನಿಮ್ಮ ಊಹೆ ತಪ್ಪು. ತನ್ನ ಯೌವನದಲ್ಲಿ ಮಣ್ಣಲ್ಲಿ ಚೆನ್ನಾಗಿ ದುಡಿದು ಹೊನ್ನಿನ ಬೆಳೆ ಪಡೆದವ ಈತ. ಎಕ್ರೆಗಳಲ್ಲಿ ತೆಂಗು ಕಂಗಿನ ತೋಟ, ತರಕಾರಿ, ಬಾಳೆ, ಮರಗೆಣಸು ಹೀಗೆ ಎಲ್ಲಾ ರೀತಿಯ ಕೃಷಿಗಳನ್ನು ಮಾಡಿ ಲಾಭ ಪಡೆದವ. ಹತ್ತು ವರ್ಷಗಳ ಹಿಂದೆಯೇ ತನ್ನ ಕೈ ಹಿಡಿದವಳು ತೀರಿ ಹೋಗಿದ್ದರಿಂದ ಈ ಅಜ್ಜ ಎಲ್ಲದಕ್ಕೂ ಮಕ್ಕಳನ್ನು ಆಶ್ರಯಿಸಬೇಕಾದ ಸ್ಥಿತಿ ಬಂದೊದಗಿತ್ತು. ಎಷ್ಟಾದರೂ ಅಪ್ಪನಲ್ಲವೇ? ಕಿರಿ ಮಗನಂತೂ ಅತೀವ ಸ್ನೇಹದಿಂದಲೇ ಅಪ್ಪನನ್ನು ನೋಡಿಕೊಳ್ಳುತ್ತಿದ್ದ. ಒಮ್ಮೆ ಅಜ್ಜನಿಗೆ ತನ್ನ ಅವಧಿ ಮುಗಿಯುತ್ತಾ ಬಂತು ಎಂದು ಅನಿಸಿದಾಗ ತನ್ನ ನಾಲ್ಕು ಮಕ್ಕಳನ್ನೂ ಕೂಡಾ ಹತ್ತಿರ ಕರೆದ. ಹಳೆಯ ಮಂಚದ ಮೇಲೆ ಮಲಗಿದ ಮುದಿ ಜೀವದ ಸುತ್ತಲೂ ಮಕ್ಕಳು, ಮೊಮ್ಮಕ್ಕಳು ಹಾಜರಾದರು. ಅಜ್ಜ ಮಾತನಾಡತೊಡಗಿದ. ಮಕ್ಕಳೇ, ನಾನು ಇನ್ನಷ್ಟು ದಿನ ಬದುಕುವೆನೆಂದು ಯಾಕೋ ಅನಿಸುತ್ತಿಲ್ಲ. ನಿಮ್ಮನ್ನೆಲ್ಲಾ ಒಳ್ಳೆಯ ರೀತಿ