Posts

Showing posts with the label ಅನುಭವ ಕಥನ

ಬಸ್ ಪಯಣದ ಸುಖ

Image
ಮೊನ್ನೆ ಶಿವಾಜಿನಗರಕ್ಕೆ ಹೋಗುತ್ತಿದ್ದಾಗ ನನ್ನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಹುಡುಗಿಯೊಬ್ಬಳು ಫೋನಲ್ಲಿ ಮಾತನಾಡುತ್ತಿರುವುದು ಬೇಡ ಬೇಡವೆಂದರೂ ನನ್ನ ಕಿವಿಗೆ ಬೀಳುತ್ತಿತ್ತು. ಸಾಮಾನ್ಯವಾಗಿ ಬಸ್‌ನಲ್ಲಿ ಪ್ರಯಾಣಿಸುವಾಗ ಕುಳಿತುಕೊಳ್ಳಲು ಸೀಟು ಸಿಕ್ಕರೆ ಪುಸ್ತಕ ಓದುವುದು ಅಭ್ಯಾಸ. ಅಂದು ಬಸ್ಸಿನಲ್ಲಿ ಜನ ತುಂಬಾ ಇದ್ದರೂ ಪುಣ್ಯಕ್ಕೆ ನನಗೆ ಸೀಟು ಸಿಕ್ಕಿತ್ತು. ಹಿಂದಿನ ಸೀಟಲ್ಲಿ ಕುಳಿತ ನನ್ನಷ್ಟೇ ವಯಸ್ಸಿನ ಹುಡುಗಿಯೊಬ್ಬಳು ವಟ ವಟ ಎಂದು ಫೋನಲ್ಲಿ ಮಾತು ಶುರು ಹಚ್ಚಿಕೊಂಡಿದ್ದಳು. ಇಂಗ್ಲೀಷ್‌ನಲ್ಲಿ ಆಕೆ ಜೋರಾಗಿ ಮಾತನಾಡುತ್ತಿದ್ದುದರಿಂದಲೇ ನನ್ನ ಕಿವಿ ನೆಟ್ಟಗಾಯಿತು. ವೈ ಯು ಇನ್‌ಸರ್ಟಿಂಗ್ ಯುವರ್ ನೋಸ್ ಇನ್ ಬಿಟ್‌ವೀನ್. ಐ ಯೆಸ್ಟರ್‌ಡೇ ಟೋಲ್ಡ್ ನಾ..ಅಂಡರ್‌ಸ್ಟಾಂಡ್ ಪಾ..ಹೀಗೇ ಆಕೆಯ ಇಂಗ್ಲಿಷ್ ಸಂಭಾಷಣೆ ಮುಂದುವರಿಯಿತು. ಮಾತು ಮಾತುಗಳೆಡೆಯಲ್ಲಿ ಆಕೆ ನೋಪಾ, ಯೆಸ್ ಪಾ ಅಂತ ಹೇಳುತ್ತಾ ತನ್ನ ಏರುದನಿಯನ್ನು ಸ್ವಲ್ಪ ಸ್ವಲ್ಪವೇ ತಗ್ಗಿಸುತ್ತಿದ್ದಳು. ಒಮ್ಮೆ ಹಿಂತಿರುಗಿ ನೋಡಿದೆ, ಆಕೆ ಫೋನ್ ಸಂಭಾಷಣೆಯಲ್ಲಿ ಮಗ್ನಳಾಗಿದ್ದಾಳೆ. ಪುಸ್ತಕ ಹಿಡಿದುಕೊಂಡು ಕೂತಿದ್ದೆನಾದರೂ ವೈ ಯು ಇನ್‌ಸರ್ಟಿಂಗ್ ಯುವರ್ ನೋಸ್ ಇನ್ ಬಿಟ್‌ವೀನ್ ಎಂಬ ವಾಕ್ಯ ನನ್ನ ಕಿವಿಗೆ ಬೇಡ ಬೇಡವೆಂದರೂ ಅಪ್ಪಳಿಸುತ್ತಿತ್ತು. ಆಕೆ ಹೇಳಿದ್ದು, ನೀನ್ಯಾಕೆ ಮಧ್ಯೆ ಮೂಗು ತೂರಿಸುತ್ತೀಯಾ ಎಂಬುದನ್ನೇ ಅಲ್ಲವೇ? ಕನ್ನಡ ಪ್ರತಿಪದವನ್ನೂ ಹಾಗೆಯೇ ಇಂಗ್ಲಿಷ್‌ಗೆ ಅನುವಾದ...

ಪಪ್ಪನೂ...ನನ್ನ ನಿದ್ದೆಯೂ

Image
ಪಪ್ಪನ ಬಗ್ಗೆ ಏನು ಹೇಳುವಾಗಲೂ ನಾನು ಹಾಗೇನೇ...ನಾನ್ಸ್ಟಾಪ್...ಅವರ ಬಗ್ಗೆ ಹೇಳಿದಷ್ಟು ಮುಗಿಯುವುದಿಲ್ಲ. ಅಫ್ಕೋರ್ಸ್, ಅವರ ಬಗ್ಗೆ ಬರೆಯುವಾಗಲೂ ಅಷ್ಟೇ... ಕೀಲಿಮಣೆಯಲ್ಲಿ ಬೆರಳುಗಳು ಸರಾಗವಾಗಿ ಓಡುತ್ತವೆ. ಮೊನ್ನೆ ಗೆಳೆಯರೊಬ್ಬರು ಅವರ ಅಪ್ಪನ ಬಗ್ಗೆ ಬರೆದ ಲೇಖನದ ಲಿಂಕ್ ಕಳುಹಿಸಿ ಆ ಲೇಖನವನ್ನು ಅಮ್ಮನಿಗೆ ಓದೋಕೆ ಹೇಳಿದ್ದೆ. ಆ ಬ್ಲಾಗ್ ಬರಹದ ಬಗ್ಗೆ ಮಾತನಾಡುವಾಗ ನಿನ್ನ ಅಪ್ಪನ ಬಗ್ಗೆನೂ ಬರೀ ಅಂದಿದ್ರು ಅಮ್ಮ. ಈಗಾಗಲೇ ಅಪ್ಪನ ಬಗ್ಗೆ ಎರಡ್ಮೂರು ಬ್ಲಾಗ್ ಬರಹ ಬರೆದಾಗಿದೆ. ಇನ್ನೆಂಥದ್ದು ಬರೆಯುವುದು? ಎಂದು ಕೇಳಿದಾಗ ಅಮ್ಮ ಹೇಳಿದ್ದು..ಅಪ್ಪನ ನಿದ್ದೆ ! ಹೂಂ...ಅಪ್ಪನ ನಿದ್ದೆ ಬಗ್ಗೆ ಬರೆಯೋದೆ ತುಂಬಾ ಇಂಟರೆಸ್ಟಿಂಗ್. ಇತ್ತೀಚೆಗೆ ಅಂದ್ರೆ ನಿವೃತ್ತಿಯಾದ ನಂತರ ಮನೆಯಲ್ಲೇ ಕೂರುವ ಕಾರಣ ಅಪ್ಪ ಸಿಕ್ಕಾಪಟ್ಟೆ ನಿದ್ದೆ ಮಾಡ್ತಾರೆ. ಯಾವತ್ತು ನೋಡಿದರೂ ಅದೇ ಕೈರಳಿ, ಮನೋರಮ, ಏಷ್ಯಾನೆಟ್ ನ್ಯೂಸ್ ನೋಡ್ತಾ ಇರ್ತಾರೆ ಎಂದು ಅಮ್ಮ ಗೊಣಗುತ್ತಿದ್ದರೂ, ನ್ಯೂಸ್ ನೋಡ್ತಾ ನೋಡ್ತಾ ಅಪ್ಪ ನಿದ್ದೆ ಮಾಡಿಬಿಡುತ್ತಾರೆ. ಅದೇ ವೇಳೆ ಸುದ್ದಿ ವಾಹಿನಿಗಳಲ್ಲಿ ಬ್ರೇಕಿಂಗ್ ನ್ಯೂಸ್ನ ಸೌಂಡ್ ಕೇಳಿದ್ರೆ, ಥಟ್ಟನೆ ಎಚ್ಚರ ಆಗುತ್ತೆ. ಮಾತ್ರವಲ್ಲ ಹಿತ್ತಲಿನ ಯಾವ ಮೂಲೆಯಲ್ಲಿ ತೆಂಗಿನಕಾಯಿ ಬಿದ್ರೂನೂ ಅಪ್ಪನಿಗೇ ಮೊದಲು ಗೊತ್ತಾಗೋದು. ಹೀಗೆ ವಾಹಿನಿಗಳು 5 ನಿಮಿಷಕ್ಕೊಮ್ಮೆ ಬ್ರೇಕಿಂಗ್ ನ್ಯೂಸ್ ಸದ್ದು ಮಾಡುತ್ತಿದ್ದರೆ, ಅಪ್ಪ ಅರೆ ನಿದ್ದೆಯಲ್ಲೇ ಸುದ...

ಮದರಂಗಿ ಪುರಾಣ

Image
ಕೈ ಗಳಿಗೆ ಮದರಂಗಿ ಹಚ್ಚಿ ಸಿಂಗರಿಸುವುದು ಯಾರಿಗೆ ಇಷ್ಟ ಇಲ್ಲ ಹೇಳಿ? ಚಿಕ್ಕಂದಿನಿಂದಲೂ ನನಗೆ ಕೈ ಕಾಲಲ್ಲಿ ಮದರಂಗಿ ಚಿತ್ತಾರ ಬಿಡಿಸುವುದೆಂದರೆ ತುಂಬಾ ಇಷ್ಟ. ಕೃಷ್ಣವರ್ಣವಾಗಿರುವುದರಿಂದ ನನ್ನ ಕಾಲಲ್ಲ ಕೆಂಪು ಬಣ್ಣ ಎದ್ದು ಕಾಣುತ್ತಿರಲಿಲ್ಲ...ಆದ್ರೆ ಅಂಗೈ ತುಂಬಾ ಕೆಂಪು ಕೆಂಪು ಚಿತ್ತಾರ. ಅದೂ ಎರಡೂ ಕೈಗೆ. ಎರಡೂ ಕೈಗಳಿಗೆ ಮದರಂಗಿ ಹಚ್ಚಿದ್ದನ್ನು ನೋಡಿ ಗೆಳತಿಯರು ನೀನೇನು ಮದುಮಗಳಾ? ಎಂದು ಕೇಳಿದರೆ ಐ ಡೋಂಟ್ ಕೇರ್. ಮದರಂಗಿಯ ಕೆಂಪು, ಕಂಪು ನನಗೆ ಖುಷಿ ಕೊಡುತ್ತದೆ ಎಂದಾದರೆ ನಾನ್ಯಾಕೆ ಇಂಥಾ ಪ್ರಶ್ನೆಗಳಿಗೆ ತಲೆ ಕೆಡಿಸಿಕೊಳ್ಳಲಿ? ಜನ್ಮಾಷ್ಟಮಿ ಬಂದರಂತೂ ಕೈಯಲ್ಲಿ ಮೆಹಂದಿ ಇರಲೇ ಬೇಕು. ಇನ್ನು ಸಂಬಂಧಿಕರ ಮದುವೆ ಹೋಗುವಾಗ ಕೈಯಲ್ಲಿ ಮದರಂಗಿ ಇಲ್ಲದೇ ಇದ್ದರೆ ಹೇಗೆ? ಏನಿದ್ದರೂ ಮೆಹಂದಿ ಹಚ್ಚಿಕೊಳ್ಳುವ ಸಂಭ್ರಮ, ಆ ಚಿತ್ತಾರದ ಸೊಬಗನ್ನು ನೋಡಿ ಆಸ್ವಾದಿಸುವ ಪರಿ ಇದೆಲ್ಲವೂ ಪದಗಳಿಗೆ ನಿಲುಕದ್ದು.. ಈಗಿನ ಜಮಾನದ ಮಕ್ಕಳಂತೆ ನಾವು ಚಿಕ್ಕವರಿರುವಾಗ ಮೆಹಂದಿ cone ಬಳಸುತ್ತಲೇ ಇರಲಿಲ್ಲ. ಮನೆಯ ಮುಂದೆ ಮದರಂಗಿ ಗಿಡ ಇತ್ತು. ಅದರ ಎಲೆ ಕೊಯ್ದು...ನುಣ್ಣನೆ ಅರೆದು ಅದಕ್ಕೆ ಅಳೆದು ತೂಗಿ ನೀರು ಹಾಕಿ ಕೈಗೆ ಮೆತ್ತುತ್ತಿದ್ದೆವು. ಮದರಂಗಿ ಕೆಂಪಾಗಲಿ ಎಂದು ಅದಕ್ಕೆ ಚಹಾ Decoction ಹಾಕ್ತಿದ್ದೆವು. ಇಲ್ಲದೇ ಇದ್ದಲ್ಲಿ ಮೆಹಂದಿ ಒಣಗುತ್ತಿದ್ದಂತೆ ಸಕ್ಕರೆ ನೀರು ಇಲ್ಲವೇ ಲಿಂಬೆ ಹುಳಿ ಹಿಂಡುತ್ತಿದ್ದೆವು. ಅಕ್ಕ ಹಾಸ್ಟೆಲ್್ನಲ್ಲ...

ಯಾಕೋ ಹಳೆಯದೆಲ್ಲಾ ನೆನಪಾಗುತಿದೆ...

ಇಂ ಜಿನಿಯರಿಂಗ್ ಓದುತ್ತಿದ್ದ ಕಾಲದಲ್ಲಿ ಬೆಂಗಳೂರು ನಮ್ಮ ಕನಸಿನ ಊರಾಗಿತ್ತು. ಕಲಿಕೆಯಲ್ಲಿ ಅಷ್ಟೇನೂ ಮುಂದೆ ಇಲ್ಲದಿದ್ದರೂ ಹೇಗಾದರೂ ಪರೀಕ್ಷೆಯಲ್ಲಿ 'ಬಚಾವ್್' ಆಗಿ ಎದ್ದು ನಿಲ್ಲುತ್ತಿದ್ದೆ. ಅಂತಿಮ ವರ್ಷ ಕ್ಯಾಂಪಸ್ ಇಂಟರ್್ವ್ಯೂನಲ್ಲಿ ನನ್ನ ಬುದ್ಧಿವಂತ ಗೆಳೆಯರೆಲ್ಲ ಪಾಸಾದಾಗ ನಾವು ಕಂಗ್ರಾಟ್ಸ್ ಹೇಳುವ ಗುಂಪಿನಲ್ಲಿ ನಿಲ್ಲಬೇಕಾಗಿ ಬಂತು. ನನ್ನ ಹಾಗೆಯೇ ಎಂಟು ಹುಡುಗಿಯರು ನಮ್ಮ ಗ್ಯಾಂಗ್್ನಲ್ಲಿದ್ದರು. ಕೆಲಸ ಗಿಟ್ಟಿಸಿಕೊಳ್ಳಬೇಕೆಂದು ನಾವು ಕಂಪನಿಗಳಿಗೆ ರೆಸ್ಯೂಮೆ ಫಾರ್ವ್್ರ್ಡ್ ಮಾಡುತ್ತಿರಬೇಕಾದರೆ ನಿಮಗೆ ಯಾಕೆ ಕೆಲಸ? ಹೇಗಾದರೂ ಸಾಫ್ಟ್್ವೇರ್ ಇಂಜಿನಿಯರ್ ಒಬ್ಬ ಮದುವೆ ಆಗುತ್ತಾನೆ. ಆಮೇಲೆ ಗಂಡ, ಮನೆ ಮಕ್ಕಳು ಅಂತಾ ಲೈಫ್ ಕಳೆದುಹೋಗಿ ಬಿಡುತ್ತೆ ಎಂದು 'ಬಿಟ್ಟಿ' ಉಪದೇಶ ನೀಡುವ ಹುಡುಗರಿಗೂ ಏನೂ ಕಮ್ಮಿಯಿರಲಿಲ್ಲ. ಇಂಟರ್್ವ್ಯೂನಲ್ಲಿ ಪಾಸಾಗುವ ಅರ್ಹತೆ ನಮಗಿರಲಿಲ್ಲವೋ, ನಮ್ಮನ್ನು ಆಯ್ಕೆ ಮಾಡುವ ಅರ್ಹತೆ ಅವರಿಗಿರಲಿಲ್ಲವೋ ಅಂತೂ ನಮ್ಮ ಬೆಂಗಳೂರು ಕನಸು ಕನಸಾಗಿಯೇ ಉಳಿದಿತ್ತು. ಬೆಂಗಳೂರು ಹೋಗಿ ಅಲ್ಲಿ ಕೆಲಸ ಹುಡುಕೋಣ ಎಂದರೆ ಅಷ್ಟೊಂದು ದುಡ್ಡು ಇರಬೇಕಲ್ವಾ? ಕೆಲವೊಮ್ಮೆ ಕೆಲಸ ಸಿಕ್ಕದೇ ಇದ್ದರೆ? ಮನಸ್ಸಲ್ಲಿ ನೂರಾರು ಚಿಂತೆಗಳು. ಕಾಲೇಜಿನಲ್ಲಿರುವಾಗ ಉತ್ತರ ಭಾರತದಿಂದಲೋ ಇನ್ನಾವುದೋ ರಾಜ್ಯದಿಂದ ಬಂದ ಮಕ್ಕಳು ಇಂಗ್ಲಿಷ್್ನಲ್ಲಿ ಮಾತನಾಡಿದರೆ, ಇದು ಕೇರಳ. ನಮ್ಮ ರಾಜ್ಯ ಇಲ್ಲಿ ಮಲಯಾಳಂ ಕಲಿತುಕೊಳ್ಳಿ ಎ...

ಹಳೇ ನಿದ್ರೆ ಪುರಾಣ...

ಇ ತ್ತೀಚೆಗೆ ಬ್ಲಾಗ್ ಬರೆಯೋದು ಕಡಿಮೆ ಆಗಿದೆ. ಕೆಲಸದ ಒತ್ತಡ, ಸಮಯದ ಅಭಾವ ಮತ್ತೊಮ್ಮೆ ಮೂಡ್ ಇಲ್ಲ ಹೀಗೆ ಹಲವಾರು ಕಾರಣಗಳಿಂದ ಬ್ಲಾಗ್ ಬರವಣಿಗೆ ನಿಂತುಹೋಗಿದೆ. ಏನಾದರೂ ಬರೆಯೋಣ ಎಂದು ಕೂತರೆ ವಿಷಯಗಳೇ ಸಿಗಲ್ಲ. ಈ ವಿಷಯಗಳೇ ಹಾಗೇ...ಏನಾದರೂ ಕೆಲಸ ಮಾಡುವಾಗ ಬ್ಲಾಗ್ ಬರೆಯೋಣ ಅಂತಾ ಅನಿಸುತ್ತೆ. ಟಾಯ್ಲೆಟ್್ನಲ್ಲೇ ಹೆಚ್ಚಿನ ವಿಷಯಗಳು ನೆನಪಿಗೆ ಬರುತ್ತೆ, ಆಮೇಲೆ ಬಂದು ಬರೆಯೋಣ ಎಂದು ಕೂತರೇ ಪದಗಳೇ ಸಿಗದು. ಕೆಲವೊಮ್ಮೆ ಬರೆಯಲು ವಿಷಯಗಳು ಸುಮಾರು ಇರುತ್ತದೆ, ಇವುಗಳಲ್ಲಿ ಯಾವುದನ್ನು ಬರೆಯಲಿ? ಎಂಬುದೇ ದೊಡ್ಡ ಪ್ರಶ್ನೆಯಾಗಿ ಕಾಡುವುದೂ ಉಂಟು. ಅಂತೂ ಬ್ಲಾಗ್್ಗೆ ಏನು ಬರೆಯಲಿ? ಎಂಬ ಚಿಂತೆಯಿಂದ ಮುಕ್ತಳಾಗಲು ಅಪ್ಪನಿಗೆ ಫೋನಾಯಿಸಿ, ಏನಾದರೂ ವಿಷಯ ಹೇಳಿ ಅಂದೆ. ನಿನಗಿಷ್ಟವಿರುವ ವಿಷಯದ ಬಗ್ಗೆ ಬರಿ..ಅಂದ್ರು. ಆಮೇಲೆ ನನಗಿಷ್ಟವಿರುವ ವಿಷಯಗಳನ್ನು ಪಟ್ಟಿ ಮಾಡತೊಡಗಿದೆ. ಅರೇ..ವಿಷಯ ಸಿಕ್ಕಿತು.. ನಿದ್ದೆ! ನಿದ್ದೆ ಯಾರಿಗೆ ಇಷ್ಟ ಇಲ್ಲ ಹೇಳಿ? ನಮ್ಮ ದೇವೇಗೌಡ್ರನ್ನು ನೋಡಿ...ಇನ್ನು ವಿಧಾನಸಭೆ, ಲೋಕ ಸಭಾ ಕಲಾಪದ ನಡುವೆ ಗಡದ್ದಾಗಿ ನಿದ್ದೆ ಹೋಗುವ ಮಂದಿಯನ್ನಂತೂ ನಾವು ನೋಡಿಯೇ ಇರುತ್ತೇವೆ. ನಿದ್ದೆ ಅದೊಂದು ಸುಖ, ಭಾಗ್ಯ...ಅದು ಎಲ್ಲರಿಗೂ ಒಲಿಯುವುದಿಲ್ಲ. ನನಗಂತೂ ನಿದ್ದೆ ಅಂದ್ರೆ ಸಿಕ್ಕಾಪಟ್ಟೆ ಇಷ್ಟ ಕಣ್ರೀ..ನಾನು ಪಾಪುವಾಗಿದ್ದಾಗ ನಿದ್ದೆ ಮಾಡ್ತಾನೇ ಇರ್ತಿಲ್ವಂತೆ. ಹಾಗಂತ ರಾತ್ರಿ ವೇಳೆ ರಂಪಾಟ ಮಾಡಿ ಅಮ್ಮನ ನಿದ್ದೆಯನ್ನೂ ಕೆಡಿಸ...

ಕಾಲಕ್ಕೆ ಸರಿದ ಥ್ರಿಲ್ಲಿಂಗ್ ಘಟನೆಗಳು....

ಮ ತ್ತೆ ಬಂದಿದೆ ಹೊಸ ವರುಷ. ಎಷ್ಟು ಬೇಗ ವರ್ಷ ಕಳೆದು ಹೋಯಿತಲ್ಲಾ ಎಂದು ಹೇಳುವುದು ಸಾಮಾನ್ಯವೇ. ಇನ್ನು ಮುಂದಿನ ವರ್ಷ ಏನೇನು ಮಾಡಬೇಕೆಂಬುದರ ಬಗ್ಗೆ ಯೋಚಿಸುವುದು ಸಾಮಾನ್ಯವೇ ಆದರೆ ಆ ಯೋಜನೆ ಕಾರ್ಯಗಳು ಕೈಗೂಡಿವೆಯೇ? ಎಂದು ಯೋಚಿಸಿದರೆ ಹೆಚ್ಚಿನ ಯೋಜನೆಗಳಿಗೆ 'ಇಲ್ಲ' ಎಂಬ ಉತ್ತರವೇ ಲಭಿಸುತ್ತದೆ. ನನ್ನ ವೈಯಕ್ತಿಕ ವಿಚಾರಗಳ ಬಗ್ಗೆ ಹೇಳುವುದಾದೆ ಈ ವರ್ಷ ಹಲವಾರು ಅನುಭವಗಳನ್ನು ನೀಡಿದೆ. 2010 ಜನವರಿಯಲ್ಲಿ ನನ್ನ ಕವನ ಸಂಕಲನ ಬಿಡುಗಡೆಗೊಳಿಸುವ ಮೂಲಕ ಹೊಸ ವರುಷಕ್ಕೆ ಭರ್ಜರಿ ಆರಂಭ ನೀಡಿದ್ದೆ. ನಂತರ ಕಾಲದೊಂದಿಗೆ ಸಿಹಿ ಕಹಿ ಘಟನೆಗಳು ಘಟಿಸಿ ಹೋದವು. ಕೆಲವೊಂದು ಘಟನೆಗಳು ಮನಸ್ಸಲ್ಲಿ ಮಾಸದೆ ಉಳಿದಿವೆ. ಕೆಲವೊಂದು ಜೀವನದಲ್ಲಿ ಮೊದಲಸಲ ಎನ್ನುವವು. ಇನ್ನು ಕೆಲವು ಮಾಡಿದ ತಪ್ಪನ್ನೇ ಮತ್ತೆ ಮಾಡುತ್ತಿದ್ದೆ ಎಂದು ಅನಿಸುವಂತವುಗಳು. ಇವುಗಳಲ್ಲಿ ಕೆಲವು ಥ್ರಿಲ್ಲಿಂಗ್ ಅಂತಾ ಅನಿಸುವ ಕೆಲವು ಘಟನೆಗಳೂ ಇವೆ. ಅವುಗಳು... 1.ಸಿಗ್ನಲ್ ಜಂಪ್ ಮಾಡಿದ್ದು (ಪೋಲಿಸ್ ಕಣ್ತಪ್ಪಿಸಿ) 2. ಟ್ರಾಫಿಕ್ ಜಾಮ್್ನಲ್ಲಿ ಒದ್ದಾಡಿ ಸುಸ್ತಾದಾಗ ಫ್ಲ್ಲಾಟ್್ಫಾರಂನಲ್ಲಿ ಗಾಡಿ ಓಡಿಸಿಕೊಂಡು ಬಂದದ್ದು (ಇನ್ಯಾರೋ ಫ್ಲಾಟ್್ಫಾರಂ ಮೇಲೆ ಗಾಡಿ ಓಡಿಸಿದ್ರೆ ನಂಗೆ ಕೋಪ ಬರುತ್ತೆ) 3. ನಂದಿಬೆಟ್ಟದ 'ಡೇಂಜರ್್' ಎಂದು ಬರೆದಿರುವ ಪ್ರದೇಶದಲ್ಲಿ ಹೋಗಿ ಫೋಟೋ ತೆಗೆಸಿಕೊಂಡದ್ದು ( ಭಯ ಆದ್ರೂ ಚಾಲೆಂಜ್ ಹಾಕಿದ ಕಾರಣ ಮಾತ್ರ ಅಲ್ಲಿಗೆ ಹೋದದ್ದು) ...

'ಸ್ವಂತಿಕೆ'ಯ ಅನುಭವ ಅನುಭವಿಸಿದವನೇ ಬಲ್ಲ...

ಇಂದು ಬೆಳಗ್ಗೆ ಊರಿನಿಂದ ನನ್ನ ಸ್ನೇಹಿತ ಫೋನ್ ಮಾಡಿದಾಗ 'ಏನ್ ಮಾರಾಯ್ತಿ ಈವಾಗ ಏನೂ ಬರೆಯಲ್ವಾ?' ಅಂತಾ ಕೇಳಿದ್ದ. "ಸಿಕ್ಕಾಪಟ್ಟೆ ಬ್ಯುಸಿ ಮಾರಾಯಾ. ಆಫೀಸಿನಲ್ಲೇ ದಿನ ಪೂರ್ತಿ ಕಳೆದು ಹೋಗುತ್ತೆ. ಇನ್ನು ಬ್ಲಾಗ್ ಬರೆಯೋಕೆ ಸಮಯವೇ ಸಾಕಾಗ್ತಾ ಇಲ್ಲ" ಅಂತಾ ಹೇಳಿದ್ದೆ. ನಿಜವಾಗಿಯೂ ನನ್ನ ಬ್ಲಾಗ್ ಅಪ್್ಡೇಟ್ ಆಗದೆ ತುಂಬಾ ಸಮಯ ಆಯ್ತು. ಏನಾದರೂ ಬರೆಯಬೇಕು ಅಂತ ಕುಳಿತುಕೊಂಡರೆ ಏನು ಬರೆಯಬೇಕು ಅಂತಾನೇ ಗೊತ್ತಾಗಲ್ಲ. ಯಾವ ವಿಷಯ ಬರೆಯ ಬೇಕು ಎಂದು ಯೋಚಿಸುತ್ತಲೇ ಆ ದಿನ ಕಳೆದು ಹೋಗುತ್ತದೆ. ಆಫೀಸಿಗೆ ಹೋದ ನಂತರ ಏನಾದರೂ ಬರೆಯಬೇಕು ಎಂದು ಯೋಚಿಸಿಕೊಂಡೇ ಪಿಜಿಯಿಂದ ಹೊರಡುತ್ತೇನೆ. ಆದರೆ ಆಫೀಸಿಗೆ ಬಂದ ಮೇಲೆ ಈ ಯೋಚನೆಗಳ್ಯಾವುದೂ ಅಕ್ಷರ ರೂಪಕ್ಕೆ ಇಳಿಯುವುದಿಲ್ಲ ಎಂಬುದು ಸತ್ಯ. ಹೆಚ್ಚಿನ ಯೋಚನೆಗಳು ತಲೆಯಲ್ಲಿ ಹೊಳೆಯುವುದೇ ಬಸ್ಸಿನಲ್ಲಿ ಸೀಟು ಸಿಕ್ಕದೆ ಚಡಪಡಿಸುವಾಗ, ಯಾವುದೋ ಪರೀಕ್ಷೆಗೆ ತುರಾತುರಿಯಲ್ಲಿ ಸಿದ್ದತೆ ನಡೆಸುವಾಗ ಇಲ್ಲದಿದ್ದರೆ ಬಾತ್್ರೂಮಲ್ಲಿ. ಆ ಸಮಯದಲ್ಲಿ ಬರೆಯಲಂತೂ ಸಾಧ್ಯವಿಲ್ಲ, ನಂತರ ಬರೆಯೋಣ ಅಂದ್ರೆ ಇನ್ನೊಂದು ಯೋಚನೆ ತಲೆಯೊಳಗೆ ಹೊಕ್ಕಿ ಅಲ್ಲಿ ಸಜ್ಜಿಗೆ ಬಜಿಲ್ ಆಗಿರುತ್ತೆ. ಪತ್ರಿಕಾ ಕಚೇರಿ ಅಂದ ಮೇಲೆ ದಿನಾ ನಾವು ಬರೆಯುತ್ತಲೇ ಇರುತ್ತೇವೆ. ಅದೂ ಡೆಡ್್ಲೈನ್ ಇಟ್ಟುಕೊಂಡು. ಪ್ರತಿಯೊಂದು ದಿನವೂ ಹೊಸ ಹೊಸ ಐಡಿಯಾಗಳನ್ನು ಹುಡುಕಿ ನಮ್ಮನ್ನು ನಾವೇ ಅಪ್್ಡೇಟ್ ಮಾಡಿಕೊಳ್ಳಬೇಕು. ಅದೇನೋ ಇಂತ...

ನಾನೂ ನನ್ನ ಸ್ವಂತ ಕನಸು...

ಶೀರ್ಷಿಕೆ ನೋಡಿದ ಕೂಡಲೇ ಪ್ರಕಾಶ್ ರೈ ಸಿನಿಮಾದ ಬಗ್ಗೆ ಹೇಳುತ್ತಿದ್ದೇನೆ ಅಂತಾ ತಿಳಿದುಕೊಳ್ಳಬೇಡಿ. ಅದಕ್ಕೆ 'ಸ್ವಂತ 'ಎಂಬ ಪದವನ್ನು ತುರುಕಿಸಿದ್ದು. ಆ ಚಿತ್ರ ವೀಕ್ಷಿಸಿದಾಗ ಎಲ್ಲರಂತೆ ನನಗೂ ನನ್ನ ಅಪ್ಪನ ನೆನಪು ತುಂಬಾ ಕಾಡಿತ್ತು. ನನ್ನ ಪಪ್ಪ ಅಂದ್ರೆ ಹಾಗೇನೇ...ತುಂಬಾ ಸ್ವೀಟ್. ಪಪ್ಪನ ಮುದ್ದಿನ ಮಗಳು ನಾನು. ತನ್ನ ತಮ್ಮ ಅಮ್ಮನ ಸೀರೆ ಸೆರಗು ಹಿಡಿದು ಓಡಾಡುತ್ತಿದ್ದರೆ, ಅಪ್ಪನೇ ನನ್ನ ಬೆಸ್ಟ್ ಫ್ರೆಂಡ್. ನನಗೆ ಎರಡು ವರ್ಷವಿರುವಾಗಲೇ ನಾನು ಅಪ್ಪನ ಎದೆಗೆ ಅಂಟಿಕೊಂಡು ನಿದ್ದೆಹೋಗುತ್ತಿದ್ದೆ. ಅಮ್ಮನ ಗೊಡವೆಯೇ ಇಲ್ಲ, ಅವಳಿಗೆ ಅಪ್ಪ ಮಾತ್ರ ಸಾಕಿತ್ತು ಎಂದು ಅಮ್ಮ ಈಗಲೂ ನನ್ನ ಬಾಲ್ಯವನ್ನು ನೆನಪಿಸುತ್ತಾರೆ. ಆ ಬಾಲ್ಯವೇ ಅಂತದ್ದು, ಎಲ್ಲದಕ್ಕೂ ನಂಗೆ ಪಪ್ಪ ಬೇಕು. ಸ್ನಾನ ಮಾಡಿಸುವುದು, ತಿಂಡಿ ತಿನಿಸುವುದು, ಶಾಲೆಗೆ ರೆಡಿ ಮಾಡಿಸುವಾಗ ಜಡೆ ಹಾಕಲು ಮಾತ್ರ ಅಮ್ಮ (ಅದು ಅಪ್ಪನಿಗೆ ಗೊತ್ತಿಲ್ಲದ ಕಾರಣ)ನನ್ನು ಕರೆಯುತ್ತಿದ್ದೆ. ನಾನು ಚಿಕ್ಕವಳಿರುವಾಗ ಅಮ್ಮ ಅಂದ್ರೆ ನಂಗೆ ತುಂಬಾ ಭಯ. ಅಣ್ಣನ ತುಂಟಾಟಿಕೆಗೆ ಬೈಯ್ಯುವ ಅಮ್ಮನನ್ನು ನೋಡಿದರೆ ನನಗೆ ನಡುಕ. ಅಪ್ಪ ನಮ್ಮನ್ಯಾರನ್ನು ಬೈಯ್ಯಲ್ಲ. ತುಂಬಾ ಪ್ರೀತಿಯಿಂದಲೇ ಎಲ್ಲವನ್ನೂ ಹೇಳಿಕೊಡುತ್ತಿದ್ದರು. ಅದು ಮಾಡಬಾರದು ಇದು ಮಾಡಬಾರದು ಎಂದು ಯಾವತ್ತಿಗೂ ಒತ್ತಡ ಹಾಕುತ್ತಿರಲಿಲ್ಲ ಮಾತ್ರವಲ್ಲದೆ ಮಾಡಬಾರದು ಎಂದು ಹೇಳಿದರೆ ಅದ್ಯಾಕೆ ಮಾಡಬಾರದು? ಎಂದು ನಮಗೆ ವಿವರಿಸಿ ಹೇಳುತ್ತಿದ...

ಲಾಸ್ಟ್ ಬೆಂಚ್ ಲೀಲೆ...

ಎಲ್ಲಾ ಅಪ್ಪ ಅಮ್ಮಂದಿರಂತೆ ನನ್ನ ಅಪ್ಪ ಅಮ್ಮನಿಗೂ ನಾನು ಫಸ್ಟ್ ಬೆಂಚ್ ಸ್ಟೂಡೆಂಟ್ ಆಗಿರಬೇಕೆಂಬ ಆಸೆ. ಆದಾಗ್ಯೂ, ಕಲಿಕೆಯಲ್ಲಿ ಚುರುಕು (ಆವಾಗ) ಮತ್ತು ನನ್ನ ಎತ್ತರ ಕಡಿಮೆ ಇದ್ದುದರಿಂದ :)ಪ್ಲಸ್ ಟು ವರೆಗೆ ನಾನು ಫಸ್ಟ್ ಬೆಂಚ್್ನಲ್ಲೇ ಕುಳಿತದ್ದು. ಏನಿದ್ದರೂ ಕ್ಲಾಸಿನಲ್ಲಿ ಫಸ್ಟ್ ಬೆಂಚ್ ಸ್ಟೂಡೆಂಟ್ ಅಂತಾ ಹೇಳಿಕೊಳ್ಳುವುದರಲ್ಲಿ ಏನೋ ಒಂದು ರೀತಿ ಹೆಮ್ಮೆ. ಫಸ್ಟ್ ಬೆಂಚ್ ಅಂದರೆ ವಿಐಪಿಗಳ ಸೀಟು, ಅಲ್ಲಿ ಕುಳಿತುಕೊಳ್ಳುವವರೆಲ್ಲಾ ಬುದ್ಧಿವಂತರು, ಲಾಸ್ಟ್ ಬೆಂಚ್್ನಲ್ಲಿ ಕುಳಿತುಕೊಳ್ಳುವವರೆಲ್ಲರೂ ದಡ್ಡರು ಎಂಬುದು ಅಂಬೋಣ. ಅದಕ್ಕಾಗಿಯೇ ವಿದ್ಯಾರ್ಥಿ ದೆಸೆಯಲ್ಲಿ ಫಸ್ಟ್ ಬೆಂಚ್್ನಲ್ಲಿ ಕುಳಿತುಕೊಳ್ಳುವುದೆಂದರೆ ಏನೋ ಸಾಧನೆ ಮಾಡಿದಂತೆ. ಜೊತೆಗೆ ಹೆತ್ತವರಿಗೂ ತಮ್ಮ ಮಕ್ಕಳು ಫಸ್ಟ್ ಬೆಂಚ್್ನಲ್ಲಿ ಕುಳಿತುಕೊಳ್ಳುತ್ತಿದ್ದಾರೆ ಎಂದು ಹೇಳಲು ಹೆಮ್ಮೆಯ ವಿಷಯವೇ. ಫಸ್ಟ್ ಬೆಂಚಿನಲ್ಲಿ ಕುಳಿತುಕೊಳ್ಳುವವರೆಲ್ಲಾ ಜಾಣರು, ಅವರು ನಗುವುದು ಕಡಿಮೆ ಎಂದೆಲ್ಲಾ ಲಾಸ್ಟ್ ಬೆಂಚ್್ನವರು ಕಿರಿಕ್ ಮಾಡುತ್ತಾರೆ. ಅದು ನಿಜವೂ ಹೌದು. ನಾನೇನು ಕಲಿಕೆಯಲ್ಲಿ ಹಿಂದೆ ಬಿದ್ದಿಲ್ಲ, ಆದ್ರೆ ಪ್ಲಸ್ ಟು ವರೆಗೆ ಫಸ್ಟ್ ಬೆಂಚ್್ನಲ್ಲಿ ಕುಳಿತು ಪಾಠ ಕೇಳುವುದು ಬೋರು ಬೋರು ಎನಿಸಿತ್ತು. ಕಾಲೇಜಿಗೆ ಕಾಲಿಟ್ಟ ಮೇಲೆ ಏನೋ ಸಮಾಧಾನ. ಇನ್ಮುಂದೆ ಯಾರು ನೀನು ಈ ಬೆಂಚ್್ನಲ್ಲೇ ಕುಳಿತುಕೊಳ್ಳಬೇಕೆಂದು ಹೇಳಲ್ಲ. ನಮ್ಮದು ಇಂಜಿನಿಯರಿಂಗ್ ಕಾಲೇಜು, 40 ಮಂದಿಯಿರುವ ಒಂದು ಕ್ಲ...

ರಜೆಗಾಗಿ ಪ್ರಾರ್ಥಿಸಿದ್ದ ದಿನಗಳಿವು...

ನಾವು ಚಿಕ್ಕವರಿರುವಾಗ ಮನೆಗೆ ಕ್ಯಾಲೆಂಡರ್ ತಂದರೆ ಮೊದಲು ಅದರಲ್ಲಿ ಎಷ್ಟು ಕೆಂಪು ಬಣ್ಣದ ದಿನಗಳಿವೆ ಎಂದು ಎಣಿಸುತ್ತಿದ್ದೆವು. ಈ ವರ್ಷ ಎಷ್ಟು ರಜೆ ಇದೆ? ಎಂದು ಎಣಿಸಲು ನಾನು ಮತ್ತು ನನ್ನ ತಮ್ಮ ಜಗಳವಾಡುತ್ತಿದ್ದೆವು. ಕೆಲವೊಂದು ಹಬ್ಬ, ಸರಕಾರೀ ರಜೆಗಳು ಆದಿತ್ಯವಾರ ಬಂದರೆ ಅಯ್ಯೋ ..ಒಂದು ರಜೆ ನಷ್ಟವಾಯಿತಲ್ಲಾ ಎಂಬ ಬೇಜಾರು ಬೇರೆ. 7ನೇ ಕ್ಲಾಸಿನವರೆಗೆ ಈ ಚಾಳಿ ಇರುತ್ತಿತ್ತು. ಹೈಸ್ಕೂಲ್್ಗೆ ತಲುಪಿದಾಗ ರಜೆ ದಿನದಲ್ಲೂ ಸ್ಪೆಷಲ್ ಕ್ಲಾಸ್ ಇರುತ್ತಿತ್ತು. ಕೆಲವೊಮ್ಮೆ ಸ್ಪೆಷಲ್ ಕ್ಲಾಸ್ ಖುಷಿ ತಂದರೆ ಇನ್ನೊಮ್ಮೆ ಬಾರೀ ತಲೆನೋವು ಆಗಿ ಬಿಡುತ್ತಿತ್ತು. ನಮ್ಮ ಮನೆಯಿಂದ ಹೈಸ್ಕೂಲ್್ಗೆ ಹೋಗಬೇಕಾದರೆ ಕಾಸರಗೋಡು ನಗರಕ್ಕೆ ಬಸ್ಸಲ್ಲಿ ಹೋಗಬೇಕು. ಆವಾಗ ಬಸ್ ಮುಷ್ಕರ ಬಂದರೆ ಬಾರೀ ಸಂತೋಷ. ಹಾಗೆ ಒಂದು ರಜೆ ನಮಗೆ ಸಿಗುತ್ತಿತ್ತು. ನಮ್ಮ ರಾಜ್ಯದಲ್ಲಂತೂ ಆಗಾಗ ಮುಷ್ಕರಗಳು ನಡೆಯುತ್ತಲೇ ಇರುವುದರಿಂದ ಒಂದಷ್ಟು 'ಮುಷ್ಕರ ರಜೆ'ಗಳೂ ನಮ್ಮ ಪಾಲಿಗೆ ಒದಗುತ್ತಿತ್ತು. ನಾನಂತೂ ಯಾವಾಗಲೂ ರಜೆಗಾಗಿಯೇ ಕಾಯುತ್ತಿದ್ದೆ. ಇದು ಮಾತ್ರವಲ್ಲದೆ ನಮ್ಮ ಮನೆಯಿಂದ ಕಾಸರಗೋಡಿಗೆ ಹೋಗಬೇಕಾದರೆ ಎರುದುಂಕಡವ್ ಎಂಬ ಹೊಳೆಯೊಂದನ್ನು ದಾಟಿ ಹೋಗಬೇಕು. ಆ ಹೊಳೆಗೆ ಸೇತುವೆಯೇನೋ ಇದೆ ನಿಜ ಆದರೆ ಮಳೆಗಾಲದಲ್ಲಿ ಸೇತುವೆ ಮೇಲೆ ನೀರು ಉಕ್ಕಿ ಹರಿಯುವುದರಿಂದಾಗಿ ಯಾವುದೇ ವಾಹನಗಳಿಗೆ ಅತ್ತ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಇನ್ನೊಂದು ದಾರಿಯಿದ್ದರೂ ಅದರಲ್ಲಿ ಬಸ್್ಗಳ...

ನಳ್ಳಿಯಲ್ಲಿ ಇವತ್ತೂ ನೀರಿಲ್ಲ...

ಕಾಸರಗೋಡು ಸಿಟಿಯಲ್ಲಿರುವ ನನ್ನ ದೊಡ್ಡಮ್ಮನ ಮನೆಗೆ ಹೋದ ದಿನ. ಅಂದು ಅನಿವಾರ್ಯವಾಗಿ ಅಲ್ಲಿ ಉಳಕೊಳ್ಳಬೇಕಾಗಿ ಬಂದಿದ್ದರೂ ಅದೇಕೋ ಹಳ್ಳಿಯಲ್ಲಿರುವ ನನ್ನ ಮನೆಯಲ್ಲಿ ಆರಾಮವಾಗಿ ಮಲಗಿ ನಿದ್ದೆ ಹೋಗುವ ನನಗೆ ಅಲ್ಲಿನ ದೊಡ್ಡ ದೊಡ್ಡ ಸೊಳ್ಳೆ, ವಾಹನಗಳ ಗದ್ದಲದಿಂದ ಮಧ್ಯರಾತ್ರಿಯ ವರೆಗಂತೂ ನಿದ್ದೆ ಬರಲಿಲ್ಲ. ಆಮೇಲೆ ಯಾವಾಗ ನಿದ್ದೆ ಬಂತೋ ಎಂದು ಗೊತ್ತಿಲ್ಲ. ಅಂತೂ ಮುಂಜಾನೆ ಸುಮಾರು ನಾಲ್ಕು ಗಂಟೆಗೆ ಮನೆಯಲ್ಲಿ ಪಾತ್ರೆಗಳ ಸದ್ದು ಕೇಳಿಸಿ ಎಚ್ಚೆತ್ತು ಕೊಂಡೆ. ರೈಲ್ವೇ ನಿಲ್ದಾಣದ ಪಕ್ಕದಲ್ಲೇ ಇರುವ ಮನೆಯಾಗಿದ್ದರಿಂದ ಅಣ್ಣಂದಿರು ಯಾರೋ ಬೆಳಗ್ಗಿನ ರೈಲಿಗೆ ಹೋಗುತ್ತಿರಬೇಕು ಅದಕ್ಕಾಗಿಯೇ ಇಷ್ಟೊಂದು ಗೌಜಿ ಅಂದುಕೊಂಡೆ. ಆದ್ರೆ ಅದಾಗಿರಲಿಲ್ಲ. ದೊಡ್ಡಮ್ಮನಂತೂ ನನ್ನ ಅಕ್ಕ ಅಣ್ಣಂದಿರನ್ನೆಲ್ಲಾ ಎಬ್ಬಿಸಿ ಬಿಂದಿಗೆ, ಪಾತ್ರೆ ಹಿಡಿದು ಕೊಂಡು ಅವಸರವಾಗಿ ಮನೆಯಿಂದ ಹೊರ ನಡೆದರು. ಆಗಲೇ ಗೊತ್ತಾದದ್ದು. ಮನೆಯ ಮುಂದಿರುವ ಸಾರ್ವಜನಿಕ ನಳ್ಳಿಯಲ್ಲಿ ನೀರು ಬಂದಿದೆ ಎಂದು. ಆ ಬೆಳಗ್ಗಿನ ಜಾವದಲ್ಲೇ ನಳ್ಳಿ ಮುಂದೆ ಪಾತ್ರೆಗಳ ಸಾಲು ಜೊತೆಗೆ ನಿದ್ದೆಗಣ್ಣಲ್ಲೇ ತಮ್ಮ ಸರದಿ ಯಾವಾಗ ಬರುವುದೋ ಎಂದು ಕಾದು ಕುಳಿತು ಕೊಂಡಿರುವ ಮಂದಿಯನ್ನು ಕಂಡರೆ ಅಯ್ಯೋ ಪಾಪ ಎನಿಸದಿರಲಾರದು. ಅಂತೂ ಈ ದಿನ ನೀರು ಸಿಕ್ಕಿತು ಎಂಬ ಸಮಾಧಾನದಲ್ಲಿ ಎಲ್ಲರೂ ಪಾತ್ರೆಯಲ್ಲಿ ನೀರು ತುಂಬಿಕೊಂಡು ಮನೆಯತ್ತ ನಡೆದರು. ಇದೆಲ್ಲವೂ ನನಗೆ ಹೊಸತು ಎನಿಸಿದರೂ, ಇದು ಇಲ್ಲಿಯವರ ದಿನಚರಿ ಎಂದು ದ...

ಅಮ್ಮನ ಒಲವಿನ ಓಲೆ.....

ಯಾಕೋ ಮನಸ್ಸು ನಿರಾಳವಾಗುತ್ತಿದೆ. ಬಿಸಿಲಿನಿಂದ ಇಷ್ಟು ದಿನ ಸುಡುತ್ತಿದ್ದ ಭೂಮಿ ತಂಪಾಗಿದೆ. ಮಳೆ ಇನ್ನೂ ಹನಿ ಬಿಟ್ಟಿಲ್ಲ. ಏನೋ ಮನೆಯ ನೆನಪು ತುಂಬಾ ಕಾಡುತ್ತಿದೆ, ಯಾವುದಾದರೂ ಪುಸ್ತಕ ಕೈಗೆತ್ತಿಕೊಳ್ಳೋಣ ಅಂತಾ ಇದ್ದೆ. ಭಾನುವಾರ ಆದ ಕಾರಣ ಹಾಸ್ಟೆಲ್‌ನಲ್ಲಿಯೇ ಇರಬೇಕಾದ ಪರಿಸ್ಥಿತಿ. ವಾರದಲ್ಲಿ ಸಿಗುವ ಒಂದೇ ಒಂದು ದಿನ ರಜಾದಿನ ಹಾಸ್ಟೆಲ್‌ನ ರೂಮಿನಲ್ಲಿ ಕಳೆಯುವಾಗ ಯಾಕೋ "ಏಕಾಂಗಿತನ" ನನ್ನನ್ನು ಆವರಿಸುತ್ತದೆ. ಸಾಧಾರಣ ಹುಡುಗಿಯರಂತೆ ಶಾಪಿಂಗ್, ಔಟಿಂಗ್ ಇಷ್ಟವಿಲ್ಲದ ನನಗೆ ನಾಲ್ಕು ಗೋಡೆಗಳ ಮಧ್ಯದಲ್ಲಿ, ಅನ್ಯಭಾಷೀಯರ ಪರಿಸರದಲ್ಲಿ ಪುಸ್ತಕಗಳೇ ಉತ್ತಮ ಸಂಗಾತಿಯಾಗಿವೆ. ಹಾಸ್ಟೆಲ್‌ನ ಕಿಟಿಕಿಯಿಂದ ಹೊರಗಿಣುಕಿದರೆ ತುಂತುರು ಮಳೆಹನಿಗಳು ಮರದೆಲೆಯಿಂದ ಜಾರುತ್ತಿತ್ತು. ಕೈಗೆತ್ತಿದ ಪುಸ್ತಕವೂ ಓದಬೇಕೆಂಬ ಮೂಡ್ ಇರಲಿಲ್ಲ. ಆದಾಗಲೇ ನನ್ನ ಕಣ್ಣಿಗೆ ಬಿದ್ದದ್ದು ಕಂದು ಬಣ್ಣದ ಕವರ್. ಅದು ತುಂಬಾ ಅಮೂಲ್ಯವಾದದ್ದು. ಯಾಕೆ ಗೊತ್ತಾ? ಅದರಲ್ಲಿ ತುಂಬಾ ಸಿಹಿಮುತ್ತುಗಳಿವೆ, ವಾತ್ಸಲ್ಯವಿದೆ. ಸ್ನೇಹ, ಸಲಹೆ, ಮಮತೆ, ಕಾಳಜಿ ತುಂಬಿದ ಪತ್ರ ಅದು. ಈ ಚುಮುಚುಮು ಚಳಿಯಲ್ಲಿ ಕಂದು ಬಣ್ಣದ ಕವರ್‌ನೊಳಗೆ ನನ್ನ "ಅಮ್ಮನ ಪತ್ರ" ಬೆಚ್ಚನೆ ಕುಳಿತುಕೊಂಡಿದೆ. ಅದು ಕೈಗೆತ್ತಿಕೊಂಡ ಕೂಡಲೇ ಯಾಕೋ ಮನಸ್ಸು ನಿರಾಳವಾಗುತ್ತಿದೆ. ಭಗವಾನ್ ಶ್ರೀಕೃಷ್ಣ ಯುದ್ದ ಭೂಮಿಯಲ್ಲಿ ಕುಸಿದು ಕುಳಿತ ಅರ್ಜುನನಿಗೆ ಗೀತೋಪದೇಶ ನೀಡಿ ಹುರುಪು ಹುಟ್ಟಿಸಿದಂತ...