Posts

Showing posts with the label ಆಮಂತ್ರಣ

ಉದಯೋನ್ಮುಖ ಬರಹಗಾರರಿಗೆ ಆಮಂತ್ರಣ

ನಾನು ಮತ್ತು ನನ್ನ ಗೆಳೆಯರು ಸೇರಿ ಉದಯೋನ್ಮುಖ ಬರಹಗಾರರನ್ನು ಒಂದು ಗೂಡಿಸುವ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳುತ್ತಿದ್ದೇವೆ. ಕಾರ್ಯಕ್ರಮದ ದಿನಾಂಕ ಮತ್ತು ಸ್ಥಳವನ್ನು ಆಮೇಲೆ ತಿಳಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ, ಭಾಷೆ, ಪ್ರಸ್ತುತ ಪರಿಸ್ಥಿತಿ, ಸವಾಲುಗಳು, ದೋಷಗಳು ಹೀಗೆ ಒಂದಷ್ಟು ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಇದು ಚರ್ಚಾಗೋಷ್ಠಿಯಲ್ಲ, ಸಮ್ಮೇಳನವೂ ಅಲ್ಲ. ಬದಲಾಗಿ ನಾವಿಲ್ಲಿ ಕೈಗೊಳ್ಳುವಂತಹ ತೀರ್ಮಾನಗಳು ಚಾಲ್ತಿಗೆ ಬರಬೇಕು. ನಾವು ಪ್ರಚಾರಕ್ಕಾಗಿ ಈ ಕಾರ್ಯಕ್ರಮವನ್ನು ಕೈಗೊಂಡಿಲ್ಲ. ಏನಿದ್ದರೂ ಇದು ಕನ್ನಡದ ಸೇವೆ, ಇದು ನಮ್ಮ ಭಾಷೆಗೆ ಸಲ್ಲಬೇಕು. ಇದಕ್ಕಾಗಿ ನಿಮ್ಮ ಸಹಕಾರ ಬೇಕು. ಕನ್ನಡಕ್ಕಾಗಿ ತುಡಿಯುವ ಮನ ನಿಮ್ಮದಾಗಿದ್ದರೆ ಬನ್ನಿ... ನಾವೆಲ್ಲರೂ ಒಟ್ಟಾಗಿ ಸೇರೋಣ.. ಪ್ರಸ್ತುತ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಮಾನದಂಡದಗಳು ಇಂತಿವೆ: 1. ಉದಯೋನ್ಮುಖ ಬರಹಗಾರರು (ಬರವಣಿಗೆಯಲ್ಲಿ ಆಸಕ್ತಿಯುಳ್ಳವರು) ಮಾತ್ರ 1. ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಜ್ಞಾನ 2. ಕನ್ನಡಕ್ಕಾಗಿ ತುಡಿಯುವ ಮನಸ್ಸು 3. ಪ್ರಸಕ್ತ ವಿದ್ಯಮಾನಗಳ ಬಗ್ಗೆ ಅರಿವು 5. ಭಾಗವಹಿಸಲಿಚ್ಛಿಸುವವರು ಈ ಕೆಳಗಿನ ಪ್ರಶ್ನೆಗೆ 100 ಪದಗಳಿಗೆ ಮೀರದಂತೆ ಉತ್ತರಿಸಬೇಕು. ಪ್ರಶ್ನೆ: ಸಾಹಿತ್ಯಕ್ಕೆ ಓದು ಅಗತ್ಯವೇ? ಸಾಹಿತಿ ಆದವನಿಗೆ ಸಾಮಾಜಿಕ ಬದ್ಧತೆಗಳಿರಬೇಕೆ? ನಿಮ್ಮ ಉತ್ತರವನ್ನು ಏಪ್ರಿಲ್ 25ರ ಮೊದಲು sanakabrahma@gmail.com...

ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....

ಅಂತೂ ಮಳೆ ಬಂದಿದೆ, ನಿರೀಕ್ಷೆಯೂ ಮುಗಿದಿದೆ... ಕಾವ್ಯ ಕೃಷಿಯ ಮೊದಲ ಬೆಳೆ ನೆನಪಿನ ಮಳೆಯಲ್ಲಿ ಕವನ ಸಂಕಲನದ ರೂಪದಲ್ಲಿ ಸಿದ್ಧವಾಗಿದೆ. ಜನವರಿ 10, 2010 ಭಾನುವಾರ ಬೆಳಗ್ಗೆ 10.30ಕ್ಕೆ ಕಾಸರಗೋಡಿನ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಸ್ಕೂಲ್್ನಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಹೂರ್ತ ಇಟ್ಟಾಗಿದೆ. ನೀವು ಬರುವುದೊಂದು ಬಾಕಿ ಮತ್ತೆಲ್ಲಾ ಕಾಲ ಮತ್ತು ನಿರೀಕ್ಷೆ.... ನಿಮ್ಮದೇ ನೆನವರಿಕೆಯಲ್ಲಿ, ರಶ್ಮಿ.