Posts

Showing posts from 2011

ಮಣ್ಣು

ನಾ ನು ಸತ್ತ ಮೇಲೆ ನಿಮ್ಮ ಅಪ್ಪನ ಗೋರಿ ಪಕ್ಕದಲ್ಲೇ ನನ್ನನ್ನು ಮಣ್ಣು ಮಾಡಿ ಬಿಡಿ ಎಂದಳಾ ಅಮ್ಮ... ಅಮ್ಮನ ಇಚ್ಛೆ ನೆರವೇರಿಸಿದರು ಮಕ್ಕಳು... ಅಪ್ಪ ಅಮ್ಮ ಒಂದೇ ಕಡೆ ನಿಶ್ಚಿಂತರಾಗಿ ಮಲಗಿದ್ದರು ತಮ್ಮ ಗೋರಿಯೊಳಗೆ ಕಾಲ ಉರುಳಿತು ಕೊನೆಗೊಂದು ದಿನ ಮಣ್ಣು ಮಾರಾಟವಾದಾಗ ಅಮ್ಮ ಮಲಗಿದ್ದ ಮಣ್ಣು ಮಂಗಳೂರಿಗೂ ಅಪ್ಪ ಮಲಗಿದ್ದ ಮಣ್ಣು ಕಣ್ಣೂರಿಗೂ ಟಿಪ್ಪರ್ ಲಾರಿ ಮೂಲಕ ಸಾಗಿತ್ತು ಗೋರಿಗಳು ಹೋಳಾಗಿ ಕಲ್ಲು ಕೋರೆಯಲ್ಲಿ ಧೂಳು ಹಾರಿತ್ತು ಕೆಂಪು ಕಲ್ಲುಗಳು ಒಂದರ ಮೇಲೊಂದು ಏರುತಿತ್ತು.

ಬೆಂಗ್ಳೂರಲ್ಲಿ 'ಸ್ಲಟ್ ವಾಕ್' ಆವಶ್ಯಕತೆಯಿದೆಯಾ?

Image
ಸ ಮಾಜದಲ್ಲಿ ಮಹಿಳೆಗೆ ಸ್ವಾತಂತ್ರ್ಯ ಬೇಕೇ ಬೇಕು. ಆ ಸ್ವಾತಂತ್ರ್ಯವನ್ನು ವ್ಯಕ್ತಪಡಿಸಲು ಚಿಕ್ಕದಾದ ಬಟ್ಟೆತೊಟ್ಟು ಅಂಗಾಂಗಳನ್ನು ಪ್ರದರ್ಶಿಸಿ ಬೀದಿಗಿಳಿಯುವ ಆವಶ್ಯಕತೆ ಇದೆಯೇ? ಹೀಗೊಂದು ಪ್ರಶ್ನೆ ಕಾಡಿದ್ದು ಸ್ಲಟ್ ವಾಕ್ ಬಗ್ಗೆ ಕೇಳಿದಾಗಲೇ. 'ಸ್ಲಟ್ ವಾಕ್ ' (ಅಸಭ್ಯ ನಡೆ)ಯ ಹುಟ್ಟು ಕೆನಡಾದಲ್ಲಾಗಿದ್ದರೂ, ಅದು ಬಹುಬೇಗನೆ ಎಲ್ಲಾ ರಾಷ್ಟ್ರಗಳಲ್ಲೂ ಹರಡಿ ಹೊಸ ದಿಶೆಯನ್ನೇ ಪಡೆದುಕೊಂಡಿದೆ ಎಂದು ಹೇಳಬಹುದು. ಕೆನಡಾದ ಪೊಲೀಸ್ ಅಧಿಕಾರಿಯೊಬ್ಬರು "ಅತ್ಯಾಚಾರಕ್ಕೊಳಗಾಗುವುದನ್ನು ತಡೆಯಲು ಮಹಿಳೆಯರು ನೀತಿಗೆಟ್ಟವರಂತೆ ಉಡುಪು ಧರಿಸಕೂಡದು" ಎಂದು ಸಲಹೆ ನೀಡಿದರು. ಅಷ್ಟಕ್ಕೇ ಜಗತ್ತಿನೆಲ್ಲೆಡೆ ಪ್ರತಿಭಟನೆ ಆರಂಭವಾಗಿಬಿಟ್ಟಿತು. 'ಸ್ಲಟ್ ' ಎಂಬ ಪದವನ್ನೇ ಹಿಂತೆಗೆದುಕೊಳ್ಳಬೇಕೆಂದು ಮಹಿಳೆಯರು ಬೀದಿಗಿಳಿದರು. ಚಿಕ್ಕದಾದ ಸ್ಕರ್ಟ್, ಬಿಕಿನಿ ಟಾಪ್, ಸ್ಲೀವ್ ಲೆಸ್, ಬ್ಯಾಕ್ ಲೆಸ್ ಒಟ್ಟಾರೆ ಎಲ್ಲಾ ಲೆಸ್ ಆಗಿರುವ ಉಡುಗೆ ತೊಟ್ಟು ಮಹಿಳಾಮಣಿಗಳು ಪ್ರತಿಭಟನೆ ಮಾಡಿದರು. ಅತ್ಯಾಚಾರಕ್ಕೆ ಮಹಿಳೆಯರ ಉಡುಗೆ ಮಾತ್ರ ಕಾರಣವೇ? ಎಂಬ ಪ್ರಶ್ನೆ ಅವರದ್ದಾಗಿತ್ತು. ಅದೇ ವೇಳೆ ನಾವು ಪ್ರಚೋದನಾಕಾರಿ ಉಡುಗೆ ತೊಡುವ ಹಕ್ಕುಳ್ಳವರು, ನಾವು ಯಾವುದೇ ರೀತಿಯಲ್ಲಿ ದಿರಿಸು ಧರಿಸಿದರೆ ಏನಿವಾಗ? ಎಂಬ ವಾದವನ್ನು ಅವರು ಉಡುಗೆಗಳೇ ಪ್ರತಿಪಾದಿಸುತ್ತಿದ್ದವು. ಹಾಗಂತ ಈ ಪ್ರತಿಭಟನೆಯಲ್ಲಿ ಭಾಗವಹಿಸಿದವರು ಸಾಮಾನ್ಯ ಮಹಿಳೆಯರಾಗಿರಲಿಲ

ಈ ಹೆಣ್ಮಗಳ ಹೋರಾಟಕ್ಕೆ ಕೊನೆ ಎಂದು?

Image
ಐ ಶ್ವರ್ಯಾ ರೈ ನವಂಬರ್ ತಿಂಗಳಲ್ಲಿ ಯಾವ ದಿನಾಂಕ ಮಗುವಿಗೆ ಜನ್ಮ ನೀಡುತ್ತಾಳೆ? ಅದು ಹೆಣ್ಣೋ, ಗಂಡೋ? ಅಥವಾ ಅವಳಿಯೋ? ಐಶ್ವರ್ಯಾ ರೈಯ ಹೆರಿಗೆ ದಿನಾಂಕಕ್ಕೂ ಜನ ಬೆಟ್ಟಿಂಗ್ ಶುರುಮಾಡಿದ್ದಾರೆ! ಅಂದ ಹಾಗೆ ಐಶ್ವರ್ಯಾ ರೈ ಅಂದ್ರೆ ನಮ್ ತರಾನೇ ಇರುವ ಓರ್ವ ಹೆಣ್ಣು ಮಗಳು. ಮಿಸ್್ವರ್ಲ್ಡ್ ಪಟ್ಟ ಧರಿಸಿ, ಬಾಲಿವುಡ್್ನಲ್ಲಿ ಮಿಂಚಿ, ಹಾಲಿವುಡ್್ಗೂ ಹಾರಿ, ಬಿಗ್ ಬಿ ಬಚ್ಚನ್್ನ ಪುತ್ರ ಅಭಿಷೇಕ್ ಬಚ್ಚನ್್ರನ್ನು ವರಿಸಿದ ಕರುನಾಡ ಕುವರಿ. ಆಕೆ ಸೀನಿದ್ದು, ಕೆಮ್ಮಿದ್ದು, ನಕ್ಕಿದ್ದು ಎಲ್ಲವೂ ಮಾಧ್ಯಮಗಳ ಪಾಲಿಗೆ ಬ್ರೇಕಿಂಗ್ ನ್ಯೂಸ್! ಯಾಕೆಂದರೆ ಆಕೆ ಸೆಲೆಬ್ರಿಟಿ. ಅದೇ ವೇಳೆ ನಮ್ಮ ದೇಶದಲ್ಲಿ ಅದೆಷ್ಟೋ ಮಹಿಳೆಯರು ಹೆರಿಗೆಯ ವೇಳೆ ಸಾವನ್ನಪ್ಪುತ್ತಿದ್ದರೂ, ಅದೊಂದು ಚಿಕ್ಕ ಸುದ್ದಿಯಾಗಿ ಮಾರನೇ ದಿನಕ್ಕೆ ರದ್ದಿಯಾಗಿ ಬಿಡುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಮ್ಮ ಟಿಆರ್್ಪಿ ಹೆಚ್ಚಿಸುವಲ್ಲಿ ನಿರತರಾಗಿರುವ ಸಮೂಹ ಮಾಧ್ಯಮಗಳು ಕೆಲವೊಮ್ಮೆ ಸತ್ಯಾವಸ್ಥೆಯನ್ನು ಮರೆತು ವರ್ತಿಸುತ್ತಿರುವುದು ನಿಜವಾಗಿಯೂ ಖೇದಕರ. ಇದೀಗ ಇಡೀ ಭರತ ಖಂಡವೇ ಐಶ್ವರ್ಯಾ ರೈ ಬಗ್ಗೆ ಮಾತನಾಡುತ್ತಿದೆ. ನವಂಬರ್ 1ರಂದು ಆಕೆಯ ಬರ್ತ್್ಡೇ. ಅದನ್ನು ಹೇಗೆ ಆಚರಿಸುತ್ತಾರೆ? ಅದೇ ತಿಂಗಳಲ್ಲಿ ಹೆರಿಗೆ ಬೇರೆ. ಮಗುವಿಗೆ ಯಾವ ಹೆಸರಿಡುತ್ತಾರೆ? ಹೀಗೆ ಚರ್ಚೆಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಈ ದೊಡ್ಡ ಸುದ್ದಿಗಳ ನಡುವೆ 39ರ ಹರೆಯದ ಇರೋಂ ಚಾನು ಶರ್ಮಿಳಾ ಎಂಬಾಕೆ ಅಮ

"ಕರ್ನಾಟಕ ಚೆಕ್ ಪೋಸ್ಟ್ ಗಳಲ್ಲಿ ಮಾಮೂಲುದಾರರು"- ನಟ ಪೃಥ್ವೀರಾಜ್ ಹೇಳಿದ ರಿಯಲ್ ಸ್ಟೋರಿ

Image
ಚೆ ಕ್ ಪೋಸ್ಟ್ ಗಳಲ್ಲಿ ಕತ೯ವ್ಯ ನಿರತರಾಗಿರುವ ಪೊಲೀಸರು ಲಂಚ ಕೇಳುವುದು ಹೊಸತೇನಲ್ಲ. ಅವರಿಗೆ 'ಮಾಮೂಲು' ಕೊಟ್ಟು ರಾಜ್ಯದ ಗಡಿ ದಾಟಿ ಬರುವ ಪ್ರತಿಯೊಬ್ಬ ಪ್ರಯಾಣಿಕನು ಪೊಲೀಸರಿಗೆ ಹಿಡಿಶಾಪ ಹಾಕುತ್ತಾನೆಯೇ ಹೊರತು ಯಾರೂ ಈ ಬಗ್ಗೆ ಕೇಸು ದಾಖಲಿಸುವುದಿಲ್ಲ ಎಂಬುದು ದುರದೃಷ್ಟಕರ. ಕೇರಳ-ಕನಾ೯ಟಕ ಗಡಿ ಪ್ರದೇಶದಲ್ಲಿ ಪೊಲೀಸರು ಮಾಮೂಲು ವಸೂಲಿ ಮಾಡುತ್ತಿರುವ ಬಗ್ಗೆ ಮಲಯಾಳ ಮನೋರಮಾ ಪತ್ರಿಕೆಯಲ್ಲೊಂದು ಸುದ್ದಿ ಪ್ರಕಟವಾಗಿದೆ. ಈ ಸುದ್ದಿ ಕನಾ೯ಟಕದ ಜನತೆಗೂ ತಲುಪಲಿ ಎಂಬ ಆಶಯದೊಂದಿಗೆ ಈ ಬ್ಲಾಗ್ ಬರೆಯುತ್ತಿದ್ದೇನೆ. ಕೇರಳ ಕನಾ೯ಟಕ ಗಡಿಪ್ರದೇಶವಾದ ಗುಂಡ್ಲುಪೇಟೆಯಲ್ಲಿ ರಂಜಿತ್ ನಿದೇ೯ಶನದ 'ಇಂಡಿಯನ್ ರುಪೀ' ಎಂಬ ಮಲಯಾಳಂ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ವೇಳೆ ಗಡಿಪ್ರದೇಶದಲ್ಲಿ ಕನಾ೯ಟಕ ಪೊಲೀಸರು ಲಂಚಕ್ಕಾಗಿ ತಮ್ಮನ್ನು ಪೀಡಿಸಿದ ಘಟನೆಯ ಬಗ್ಗೆ ಮಲಯಾಳಂ ಚಿತ್ರನಟ ಪೃಥ್ವೀರಾಜ್ ಹೇಳಿದ ರಿಯಲ್ ಸ್ಟೋರಿ . "ರಾಜ್ಯದ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಮತ್ತು ಪೊಲೀಸ್ ಏಯ್ಡ್ ಪೋಸ್ಟ್ ಗಳಿರುವುದೇ ಪ್ರಯಾಣಿಕರ ಹಾಗೂ ಸರಕು ಸಾಗಾಟಗಾರರ ಭದ್ರತೆಗಾಗಿ. ಇವರಿಗೆ ಜನರಿಂದ 'ಮಾಮೂಲು' ವಸೂಲು ಮಾಡುವ ಅಧಿಕಾರವಿರುವುದಿಲ್ಲ. ಆದರೆ, ಬತ್ತೇರಿಯಿಂದ ಗುಂಡ್ಲುಪೇಟೆಗೆ ತಲುಪಲು ನಮ್ಮ ಸಿನಿಮಾ ಟ್ರೂಪ್ ಗೆ ಪ್ರತಿಯೊಂದು ಚೆಕ್ ಪೋಸ್ಟ್ ನಲ್ಲಿ ಪ್ರತಿ ದಿನ ನೀಡಬೇಕಾಗಿ ಬಂದ ಹಣ 200 ರು. ಪ್ರತಿ ಪ್ರಯಾಣದ ನಡ

ಯಾಕೋ ಹಳೆಯದೆಲ್ಲಾ ನೆನಪಾಗುತಿದೆ...

ಇಂ ಜಿನಿಯರಿಂಗ್ ಓದುತ್ತಿದ್ದ ಕಾಲದಲ್ಲಿ ಬೆಂಗಳೂರು ನಮ್ಮ ಕನಸಿನ ಊರಾಗಿತ್ತು. ಕಲಿಕೆಯಲ್ಲಿ ಅಷ್ಟೇನೂ ಮುಂದೆ ಇಲ್ಲದಿದ್ದರೂ ಹೇಗಾದರೂ ಪರೀಕ್ಷೆಯಲ್ಲಿ 'ಬಚಾವ್್' ಆಗಿ ಎದ್ದು ನಿಲ್ಲುತ್ತಿದ್ದೆ. ಅಂತಿಮ ವರ್ಷ ಕ್ಯಾಂಪಸ್ ಇಂಟರ್್ವ್ಯೂನಲ್ಲಿ ನನ್ನ ಬುದ್ಧಿವಂತ ಗೆಳೆಯರೆಲ್ಲ ಪಾಸಾದಾಗ ನಾವು ಕಂಗ್ರಾಟ್ಸ್ ಹೇಳುವ ಗುಂಪಿನಲ್ಲಿ ನಿಲ್ಲಬೇಕಾಗಿ ಬಂತು. ನನ್ನ ಹಾಗೆಯೇ ಎಂಟು ಹುಡುಗಿಯರು ನಮ್ಮ ಗ್ಯಾಂಗ್್ನಲ್ಲಿದ್ದರು. ಕೆಲಸ ಗಿಟ್ಟಿಸಿಕೊಳ್ಳಬೇಕೆಂದು ನಾವು ಕಂಪನಿಗಳಿಗೆ ರೆಸ್ಯೂಮೆ ಫಾರ್ವ್್ರ್ಡ್ ಮಾಡುತ್ತಿರಬೇಕಾದರೆ ನಿಮಗೆ ಯಾಕೆ ಕೆಲಸ? ಹೇಗಾದರೂ ಸಾಫ್ಟ್್ವೇರ್ ಇಂಜಿನಿಯರ್ ಒಬ್ಬ ಮದುವೆ ಆಗುತ್ತಾನೆ. ಆಮೇಲೆ ಗಂಡ, ಮನೆ ಮಕ್ಕಳು ಅಂತಾ ಲೈಫ್ ಕಳೆದುಹೋಗಿ ಬಿಡುತ್ತೆ ಎಂದು 'ಬಿಟ್ಟಿ' ಉಪದೇಶ ನೀಡುವ ಹುಡುಗರಿಗೂ ಏನೂ ಕಮ್ಮಿಯಿರಲಿಲ್ಲ. ಇಂಟರ್್ವ್ಯೂನಲ್ಲಿ ಪಾಸಾಗುವ ಅರ್ಹತೆ ನಮಗಿರಲಿಲ್ಲವೋ, ನಮ್ಮನ್ನು ಆಯ್ಕೆ ಮಾಡುವ ಅರ್ಹತೆ ಅವರಿಗಿರಲಿಲ್ಲವೋ ಅಂತೂ ನಮ್ಮ ಬೆಂಗಳೂರು ಕನಸು ಕನಸಾಗಿಯೇ ಉಳಿದಿತ್ತು. ಬೆಂಗಳೂರು ಹೋಗಿ ಅಲ್ಲಿ ಕೆಲಸ ಹುಡುಕೋಣ ಎಂದರೆ ಅಷ್ಟೊಂದು ದುಡ್ಡು ಇರಬೇಕಲ್ವಾ? ಕೆಲವೊಮ್ಮೆ ಕೆಲಸ ಸಿಕ್ಕದೇ ಇದ್ದರೆ? ಮನಸ್ಸಲ್ಲಿ ನೂರಾರು ಚಿಂತೆಗಳು. ಕಾಲೇಜಿನಲ್ಲಿರುವಾಗ ಉತ್ತರ ಭಾರತದಿಂದಲೋ ಇನ್ನಾವುದೋ ರಾಜ್ಯದಿಂದ ಬಂದ ಮಕ್ಕಳು ಇಂಗ್ಲಿಷ್್ನಲ್ಲಿ ಮಾತನಾಡಿದರೆ, ಇದು ಕೇರಳ. ನಮ್ಮ ರಾಜ್ಯ ಇಲ್ಲಿ ಮಲಯಾಳಂ ಕಲಿತುಕೊಳ್ಳಿ ಎ

ನನ್ನದೂ ಒಂದು

ನೂ ರು ರುಪಾಯಿಗೆ ಸಿಕ್ಕ ಫ್ಯಾಷನ್ ಚಪ್ಪಲಿ ಮೆಟ್ಟಿ, ಅದೇ ಜೀನ್ಸು, ಮೇಲೊಂದು ಟೀ ಶರ್ಟು ಮತ್ತೊಂದು ಬ್ಯಾಗು, ಪರ್ಸ್... ಬಿಎಂಟಿಸಿಯಲ್ಲಿ ಹೈ ಹೀಲ್ಡ್ ಚಪ್ಪಲಿ ತುಳಿತಕ್ಕೆ ಚೀರಿ, ನೂಕು ನುಗ್ಗಲಲ್ಲಿ ಚಡಪಡಿಸಿ ಬಿದ್ದು ಏಳುತಿದೆ ಬದುಕು... ಅವಸರದಲ್ಲಿ ಅರ್ಧಂಬರ್ಧ ತಿಂದ ತಿಂಡಿ ಬಸ್ಸಲ್ಲೇ ಜೀರ್ಣವಾಗಿ ಹೊಸ ಕನಸುಗಳು ಮತ್ತೆ ಚಿಗುರುತ್ತಿವೆ ಮನಸ್ಸಲ್ಲಿ ದಾರಿಯಂಗಡಿಗಳಲ್ಲಿ ತೂಗು ಹಾಕಿದ ಟೀ ಶರ್ಟು, ಸಲ್ವಾರುಗಳು ಕೈ ಬೀಸಿ ಕರೆಯುತ್ತಿವೆ... ನೂರು ರುಪಾಯಿ ಇಡಿ ನೋಟು ಬಸ್ ಪಾಸು, ಐಡಿ ಕಾರ್ಡಿನ ನಡುವೆ ಬೆಚ್ಚನೆ ಕುಳಿತಿರಲು ಹಳೇ ರಸೀದಿ ತುಂಡುಗಳು ನಡುಗ ತೊಡಗಿದ್ದವು ಒಂದರ ಹಿಂದೆ ಮತ್ತೊಂದರಂತೆ! ಕಾಯಬೇಕಾಗಿದೆ ತಿಂಗಳ ಪಗಾರಕ್ಕೆ ಮನೆಗೆ ಕಳುಹಿಸಬೇಕಾಗಿದೆ ಒಂದಿಷ್ಟು ಮೊತ್ತ ಮನೆ ಬಾಡಿಗೆ, ಕ್ರೀಮು, ಪೌಡರು ಒಂದಷ್ಟು ಮ್ಯಾರಿ ಬಿಸ್ಕತ್ತು! ಪಟ್ಟಿ ಬೆಳೆಯುತ್ತಿದ್ದರೆ ಹಣ ಕುಗ್ಗುತ್ತಿತ್ತು ಜೇಬಲ್ಲಿ ಕೊನೆಗೂ 'ಪಟ್ಟಿ'ಯಲ್ಲಿ ಕೆಲವೊಂದನ್ನು ಕಳೆದು, ಉಳಿದದ್ದನ್ನು ಕೂಡಿಸಿ ಹೇಗೋ 'ಅಡ್ಜೆಸ್ಟ್' ಮಾಡಿ ಮುಂದಿನ ಪಗಾರಕ್ಕಾಗಿ ದಿನ ಎಣಿಕೆ ಶುರುವಾಗಿದೆ...

ನಮ್ಮೂರ ಗೋರ್ಮೆಂಟು ಬಾವಿ

" ಊ ರಿಗೊಬ್ಬಳೇ ಪದ್ಮಾವತಿ" ಎಂಬಂತೆ ನಮ್ಮೂರಲ್ಲೂ ಒಂದು ಸರ್ಕಾರಿ ಬಾವಿ ಇದೆ. ಸರ್ಕಾರಿ ಬಾವಿ ಎಂದು ಯಾರು ಹೇಳಲ್ಲ...ಎಲ್ಲರೂ ಅದನ್ನು ಗೋರ್ಮೆಂಟು ಬಾವಿ ಎಂದೇ ಹೇಳೋದು. ನಮ್ಮೂರಿನ ಜನರ ದಾಹ ತೀರಿಸುವ ಏಕೈಕ ಜಲನಿಧಿ ಇದು. ಊರ ಮಧ್ಯೆ ಸಿಮೆಂಟು ಕಟ್ಟೆಯ ಈ ಬಾವಿಯ ಪಕ್ಕವೇ ಸಿಮೆಂಟಿನ ಒಂದು ಸಣ್ಣ ಟ್ಯಾಂಕ್ ಕೂಡ ಇದೆ. ನೀರು ಸೇದೋಕೆ ಬಂದೋರು ಯಾರಾದ್ರೂ ಆ ಟ್ಯಾಂಕ್್ಗೆ ಒಂದು ಕೊಡ ನೀರು ಹಾಕಿ ಬಿಟ್ಟರೆ ಅಲ್ಲಿರುವ ಪ್ರಾಣಿ ಪಕ್ಷಿಗಳ ದಾಹವೂ ಇಂಗುತ್ತದೆ. ಗೋರ್ಮೆಂಟು ಬಾವಿ ಅಂದರೆ ಇನ್ನು ಹೇಳಬೇಕೆ? ಸ್ವಂತ ಮನೆ ಕಟ್ಟಿ ಬಾವಿ ತೋಡುವವರೆಗೂ, ಮನೆಯ ಬಾವಿಯಲ್ಲಿ ನೀರು ಬತ್ತಿದಾಗಲೂ ನೆನಪಾಗುವುದೇ ಈ ಬಾವಿ. ಈವಾಗ ಮನೆಗೊಂದು ಬೋರ್್ವೆಲ್ ಜತೆಗೆ ಪಂಚಾಯತ್ ವತಿಯಿಂದ ಮನೆ ಮನೆಗೆ ನೀರು ಸೌಕರ್ಯವಿರುವುದರಿಂದ ಬಾಡಿಗೆ ಮನೆಯಲ್ಲಿ ವಾಸವಿರುವವರೇ ಈ ಬಾವಿಯ ಗಿರಾಕಿಗಳು. ಬೆಳಗ್ಗೆ ಬೆಳಕು ಮೂಡುತ್ತಲೇ ನೀರೆಯರು ಬಾವಿಯತ್ತ ಧಾವಿಸುತ್ತಾರೆ. ಚಾ ಆಯ್ತಾ? ತಿಂಡಿ ಏನು? ಎಂಬ ಒನ್ ಲೈನ್ ಪ್ರಶ್ನೆಗೆ ಒಂದೇ ಪದದಲ್ಲಿ ಉತ್ತರಿಸಿ ನೀರು ಸೇದಿ ಗಡಿಬಿಡಿಯಲ್ಲಿ ನೀರು ಕೊಂಡೊಯ್ಯುವುದು ಬೆಳಗ್ಗಿನ ವಿಶೇಷ . ಮಧ್ಯಾಹ್ನದ ವೇಳೆಗೆ ಬಾವಿಕಟ್ಟೆಯ ಸುತ್ತಲೂ ತಟ ಪಟ ಅಂತಾ ಬಟ್ಟೆ ಒಗೆಯುವವರೇ ಜಾಸ್ತಿ. ಅಲ್ಲೇ ಬಟ್ಟೆ ಒಗೆದು ಪಕ್ಕದಲ್ಲಿರುವ ಮರಗಳ ಕೊಂಬೆಗಳಿಗೆ ಹಗ್ಗ ಕಟ್ಟಿಯೋ, ಇಲ್ಲದಿದ್ದರೆ ಅಲ್ಲೇ ಪಾರೆಕಲ್ಲಿನ ಮೇಲೆ ಬಟ್ಟೆ ಒಣಗಿಸಿ ಮನೆಗೆ ಮರಳುವವರೇ ಜಾ

ಅಪ್ಪನಿಗೊಂದು ಪತ್ರ

ಪ್ರೀತಿಯ ಪಪ್ಪಾ, ಹೇಗಿದ್ದೀರಾ? ನಾನು ಚೆನ್ನಾಗಿದ್ದೇನೆ. ಆದರೆ ಮನಸ್ಸು ಯಾವುದೋ ಸುಳಿಯಲ್ಲಿ ಸಿಕ್ಕಿ ಚಡಪಡಿಸುತ್ತಿದೆ. ನನ್ನ ವೇದನೆಯನ್ನು ಯಾರಲ್ಲೂ ಹೇಳಿ ಕೊಳ್ಳಲು ಆಗದೆ ನಾನು ಒದ್ದಾಡುತ್ತಿದ್ದೇನೆ. ಸುಮ್ಮನೆ ಕುಳಿತು ಜೋರಾಗಿ ಅತ್ತು ಬಿಡಬೇಕೆಂದು ಅನಿಸುತ್ತಿದೆ. ಆದರೆ ಅಳುವಷ್ಟು ಸ್ವಾತಂತ್ರ್ಯವೂ ನನ್ನಲ್ಲಿ ಇಲ್ಲಪ್ಪಾ... ದಿನವೂ ನಗು ನಗುತ್ತಿದ್ದ ಹುಡುಗಿ ನಾನು. ನನ್ನ ಜೀವನದಲ್ಲಿ ನಾನು ಬಯಸಿದ್ದೆಲ್ಲವನ್ನೂ ನೀವು ನನಗೆ ನೀಡಿದ್ದೀರಿ. ಚಿಕ್ಕವಳಿರುವಾಗ ನಾನು ಅತ್ತರೆ ನಿಮ್ಮ ಮನಸ್ಸು ಅದೆಷ್ಟು ನೋಯುತಿತ್ತು!. ನಾನು ದೂರದ ಊರಿಗೆ ಹೊರಟು ನಿಂತಾಗ ನಿಮ್ಮ ಕಣ್ಣಂಚಲ್ಲಿ ನೀರ ಹನಿ ಕಂಡಿದ್ದೆ. ಕಣ್ಣೀರೊರಸುತ್ತಾ ನಿಮ್ಮನ್ನು ಅಪ್ಪಿ ಹಿಡಿದಾಗ, ಪುಟ್ಟೀ...ನೀನು ಪಪ್ಪನ ಮಗಳಲ್ವಾ..ಹೀಗೆಲ್ಲಾ ಚಿಕ್ಕ ಮಕ್ಕಳ ತರ ಅಳ್ಬಾದು೯ ಅಂತಾ ನನಗೆ ಮುತ್ತಿಟ್ಟು ಕಳುಹಿಸಿಕೊಟ್ಟವರು ನೀವು. ಪಪ್ಪಾ...ನನ್ನ ಜೀವನದಲ್ಲಿ ಬಂದ ಮೊದಲ ಪುರುಷನೇ ನೀವು. ಪಪ್ಪ ಎನ್ನುವುದಕ್ಕಿಂತ ಮಿಗಿಲಾಗಿ ನೀವು ನನ್ನ ಬೆಸ್ಟ್ ಫ್ರೆಂಡ್ ಆಗಿದ್ದಿರಿ. ನನ್ನ ಕೈಗೆ ಮದರಂಗಿ ಇಡುವಾಗ ನಿಮ್ಮ ಕೈ ಗೂ ಮದರಂಗಿ ಇಟ್ಟು ಸಂಭ್ರಮಿಸುತ್ತಿದ್ದೆ. ನೇಲ್ ಪಾಲಿಶ್ ಖರೀದಿ ಮಾಡುವಾಗ ನೇಲ್ ಪಾಲೀಶ್ ನಿಮ್ಮ ಉಗುರಿಗೆ ಹಚ್ಚಿ ಸ್ಯಾಂಪಲ್ ನೋಡುತ್ತಿದೆ. ಅಮ್ಮ ನನ್ನನ್ನು ಬೈದಾಗೆಲ್ಲಾ ನಿಮ್ಮ ಮಡಿಲಲ್ಲಿ ಬಿದ್ದು ಅಳುತ್ತಿದ್ದೆ. ಅಕ್ಕನ ಜತೆ ಜಗಳವಾಡಿದಾಗ 'ಹೋಗಲಿ ಬಿಡು ಅವಳು ದೊಡ

ಹ್ಯಾಪಿ ಬರ್ತ್ ಡೇ ಟು ಮೀ...

Image
ಇ ವತ್ತು ನನ್ನ ಬ್ಲಾಗ್ ಅನುರಾಗದ ಹುಟ್ಟು ಹಬ್ಬ. ಕಳೆದ 4 ವಷ೯ಗಳಿಂದ ನನ್ನ ಮನಸ್ಸಿಗೆ ತೋಚಿದ್ದೆಲ್ಲವನ್ನೂ ಈ ಬ್ಲಾಗ್ ನಲ್ಲಿ ಗೀಚಿದ್ದೇನೆ. ಉದ್ಯೋಗದ ನಿಮಿತ್ತ ಚೆನ್ನೈಗೆ ತೆರಳಿದಾಗ ಕನ್ನಡದಲ್ಲಿ ಹೇಗೆ ಟೈಪ್ ಮಾಡಬೇಕೆಂದೇ ಗೊತ್ತಿರಲಿಲ್ಲ. ಅಲ್ಲಿ ಕನ್ನಡ ಟೈಪ್ ಮಾಡಲು ಕಲಿತೆ. ಇಂಟರ್ನೆಟ್ ನಲ್ಲಿ ಇನ್ನೊಬ್ಬರ ಬ್ಲಾಗ್ ನೋಡುತ್ತಿದ್ದರೆ ನನಗೂ ಒಂದು ಬ್ಲಾಗ್ ಬೇಕೆಂಬ ಆಸೆ ಹುಟ್ಟಿಕೊಂಡಿತ್ತು. ಆವಾಗ ಹುಟ್ಟಿಕೊಂಡದ್ದೇ ಅನುರಾಗ. ಆಮೇಲೆ ಸಮಯ ಸಿಕ್ಕಾಗೆಲ್ಲಾ ಬ್ಲಾಗ್ ನಲ್ಲಿ ಗೀಚಿದ್ದೇ ಗೀಚಿದ್ದು, ಕೆಲವೇ ಸಮಯಗಳಲ್ಲಿ ನಾನೂ ಬ್ಲಾಗ್ ಲೋಕದಲ್ಲಿ ಪರಿಚಿತಳಾಗಿಬಿಟ್ಟೆ.ಅನುರಾಗದೊಂದಿಗೆ ಇನ್ನು ಮೂರು ಬ್ಲಾಗ್ ಗಳನ್ನು ಆರಂಭಿಸಿದೆ. ಬ್ಲಾಗ್ ಲೋಕದಲ್ಲಿನ ಈ ಪಯಣದಲ್ಲಿ ಹಲವಾರು ಗೆಳೆಯರು ಹಿತೈಷಿಗಳು ಸಿಕ್ಕಿದರು.ನನ್ನ ಲೇಖನಕ್ಕೆ ಪ್ರತಿಕ್ರಿಯೆ ನೀಡುವ ಮೂಲಕ ಪ್ರೋತ್ಸಾಹಿಸಿದರು. ಇನ್ನು ಕೆಲವರು ಕಾಲೆಳೆದರು. ಕೆಲವು ಕಾಲಗಳ ವರೆಗೆ ನನ್ನ ಬ್ಲಾಗ್ ನಿದ್ರಾವಸ್ಥೆಯಲ್ಲಿತ್ತು. ಈಗ ಮತ್ತೆ ಎಚ್ಚೆತ್ತುಕೊಂಡಿದೆ. ನಿಮ್ಮೆಲ್ಲರ ಆಶೀವಾ೯ದ ಮತ್ತು ಪ್ರೋತ್ಸಾಹದೊಂದಿಗೆ ಬ್ಲಾಗ್ ಲೋಕದಲ್ಲಿ ನನ್ನ ಪಯಣ ಸಾಗುತ್ತಿದೆ...ಅನುರಾಗದೊಂದಿಗೆ... ಎಲ್ಲರಿಗೂ ನನ್ನಿ, ರಶ್ಮಿ ಕಾಸರಗೋಡು.

ಇಲ್ಲ..ನನಗೆ ನಿನ್ನಲ್ಲಿ ಮುನಿಸು

ನಾ ನಡೆವ ದಾರಿಯಲಿ ನಿನ್ನ ಪಾದದ ಗುರುತು ಇರದೇ ಇರಬಹುದು ನಿನ್ನ ನೆರಳು ನಿನ್ನ ಕನಸಿನಲಿ ನಾ ಇಲ್ಲದಿರಬಹುದು ಗೆಳೆಯಾ... ನೀ ಸುರಿವ ಮಳೆಯಾದರೇನು? ಇಂಗಲು ನನ್ನೊಡಲ ತಳವಿದೆ ನೀ ಸುಡುವ ಬಿಸಿಲಾದರೇನು? ನನ್ನ ಹೃದಯದ ಗುಡಿಸಲೊಳಗೆ ತಣ್ಣನೆಯ ನೆರಳಿದೆ.... ನಿನ್ನ ಹೃದಯ ಬಾನಂತಿದ್ದರೇನು? ಹಕ್ಕಿಯಾಗಿ ನಿನ್ನತ್ತ ಹಾರಿ ಬರುವೆ ನೀನು ಭುವಿಯಂತೆ ಮಲಗಿದ್ದರೇನು? ಹನಿ ಹನಿಯಾಗಿ ಬಿದ್ದು ಪನ್ನೀರ ಚಿಮುಕಿಸುವೆ! ಸಮಾಂತರ ರೇಖೆಗಳು ನಾವು ಬಾಳ ಪಯಣಯದಲ್ಲಿ ಬೆಳಗು ರಜನಿಯಂತಿದೆ ನಮ್ಮ ಮಿಲನ ಜತೆಯಾಗಿದ್ದರೂ ಸೇರಲ್ಲ ಸೇರಿದರೂ ಬೆರೆಯಲ್ಲ ನಿನ್ನ ಪುಟ್ಟ ಹೃದಯದಲ್ಲಿ ನಾನಾಗಲಾರೆ ನಿನ್ನ 'ಕೆಟ್ಟ' ನೆನಪು ನಿನ್ನ ಹೃದಯವ ಕದ್ದೊಯ್ಯಲಾರೆ ನನ್ನಾಣೆಗೂ, ಇಲ್ಲ..ನನಗೆ ನಿನ್ನಲ್ಲಿ ಮುನಿಸು

ಏಕಾಂತತೆ ಮತ್ತು ನಾನು...

'ಎಂ ಥಾ ಮಳೆಯಪ್ಪಾ...ಈ ಟ್ರಾಫಿಕ್ ಜಾಮ್ ನಲ್ಲಿ ಮಳೆ ಬಂದರೆ ಕಿರಿಕಿರಿಯೇ.'."ನಾವು ಕೇಳಿದಷ್ಟು ದುಡ್ಡು ಕೊಟ್ಟರೆ ಬರುತ್ತೇವೆ" ಎಂದು ಹೇಳಿದ ರಿಕ್ಷಾವಾಲನಿಗೆ ಮನಸ್ಸಲ್ಲೇ ಹಿಡಿಶಾಪ ಹಾಕಿ ಅದೇ ರಿಕ್ಷಾ ಏರಿ ಮನೆಯತ್ತ ಹೊರಟ ಮಂದಿ. ಈ ನೂಕು ನುಗ್ಗಲಿನಲ್ಲಿಯೂ 'ನಾ ಫಸ್ಟು...ನಾ ಮುಂದೆ' ಎಂದು ಪುಟ್ಟ ಮಕ್ಕಳು ಉಚ್ಚೆ ಹೊಯ್ದು ಓಡಿಕೊಂಡು ಬರುವ ಹಾಗೆ ಬಿಎಂಟಿಸಿ ಬಸ್ ಗಳೆಡೆಯಲ್ಲೇ ನುಗ್ಗುವ ಬೈಕುಗಳು. ಬದುಕು ಬವಣೆಗಳ ನಡುವೆಯೂ ಮಳೆ ಸುರಿದಿದೆ. ಕಾಮೋ೯ಡ ಕವಿದಿದ್ದ ಬಾನು ತಿಳಿಯಾಗುತ್ತಿದೆ. ಕತ್ತಲ ಬದುಕಿನಲ್ಲಿ ಮಿಂಚು ಹರಿದು ಬೆಳಕಿನ ಸ್ಪಶ೯ ನೀಡಿದಾಗ ಭಾರವಾದ ಎದೆ ನಡುಗಿದೆ. ಈ ನೀರವತೆಯಲ್ಲಿನ ಏಕಾಂತತೆಯಲ್ಲಿ ನೆನಪುಗಳು ಮಾತ್ರ ಸದ್ದಿಲ್ಲದೆ ಬಂದು ಮನದ ಕದ ತಟ್ಟಿವೆ. ಪೀಜಿಯ ಕಿಟಿಕಿಯ ಮೂಲಕ ಇಣುಕಿದರೆ ಧೋ ಎಂದು ಸುರಿವ ಮಳೆ...ಒಣಗಲು ಹಾಕಿದ ಬಟ್ಟೆ ತಾರಸಿ ಮೇಲೆ ಹಾಗೆಯೇ ಇದೆ. ಮಳೆಯೊಂದಿಗೆ ತೀಡಿ ಬರುತ್ತಿರುವ ಗಾಳಿಯು ಆ ಬಟ್ಟೆಯನ್ನು ತನ್ನೊಡನೆ ಬಾ ಎಂದು ಕರೆಯುತ್ತಿದೆ. ಅದನ್ನು ನಾ ಬಿಡಲಾರೆ ಎಂದು ಬಟ್ಟೆಗೆ ಸಿಕ್ಕಿಸಿದ ಕ್ಲಿಪ್ ಗಾಳಿ ಜತೆ ಗುದ್ದಾಟಕ್ಕೆ ತೊಡಗಿದೆ. ರೂಮ್ ಮೇಟ್ ಲ್ಯಾಪ್ ಟಾಪ್ ಹಿಡಿದು ಧ್ಯಾನದಲ್ಲಿ ಕುಳಿತಂತಿದ್ದಾಳೆ. ಇಂಟರ್ ನೆಟ್ ಗೆ ಸಿಗ್ನಲ್ ಸಿಗುತ್ತಿಲ್ಲ ಎಂದು ಗೊಣಗುತ್ತಾ ಕಿಟಕಿಯ ಗಾಜು ಸರಿಸಿದ್ದಾಳೆ. ಆವಾಗಲೇ ತಣ್ಣನೆ ಗಾಳಿ ರೂಮಿನೊಳಗೆ ಪ್ರವೇಶಿಸಿದೆ. ಅಬ್ಬಾ ಸಿಗ

ನೈಂಟಿ ಜತೆಗಿನ ನಂಟು!!!

ನೈಂ ಟಿ! ಅದೊಂದು ಥರಾ ಕಿಕ್ ಕೊಡುವಂತದ್ದೇ. ಅರೇ..ನೀವು ಉದ್ದೇಶಿಸುತ್ತಿರುವ 'ಬಾಟಲಿ' ಬಗ್ಗೆ ನಾನು ಹೇಳುತ್ತಿಲ್ಲ. ನಾನು ಹೇಳೋಕೆ ಹೊರಟಿರುವುದು 90ರ ದಶಕದ ಟಿವಿ ಕಾರ್ಯಕ್ರಮಗಳ ಬಗ್ಗೆ. ದೂರದರ್ಶನ ಅದೊಂದೇ ಚಾನೆಲ್ ಸಾಕು...ಎಲ್ಲ ತಿಳಿಯೋಕೆ, ಕಲಿಯೋಕೆ. ಹಿಂದಿ ಅರ್ಥವಾಗುತ್ತಿಲ್ಲವಾದರೂ ಟಿವಿ ಮುಂದೆ ನಾವು ಹಾಜರು. ಆವಾಗನಮ್ಮ ಮನೆಯಲ್ಲಿ ಟಿವಿ ಇರಲಿಲ್ಲ, ಆದರೂ ಒಂದು ಕಿಮೀ ನಡೆದು ಪಕ್ಕದ ಮನೆಗೆ ಟಿವಿ ನೋಡಲು ಹೋಗುತ್ತಿದ್ದೆ. ಅದೂ ಮಹಾಭಾರತ ನೋಡಲು. ಮಹಾ....ಭಾರತ್ ಅಂತ ಅದರ ಹಾಡು ಶುರುವಾಗುವ ಹೊತ್ತಿಗೆ ನಾವು ಮೂವರು (ಜತೆಗೆ ಅಣ್ಣ, ಅಕ್ಕ) ಅಲ್ಲಿ ಹಾಜರು. ಅಲ್ಲಿ ಯುದ್ಧ ನಡೆಯುತ್ತಿದ್ದರೆ ಕಣ್ಣು ಮುಚ್ಚಿ ನೋಡುವುದು, ಮರಣ ಶಯ್ಯೆಯಲ್ಲಿರುವ ಬೀಷ್ಮನನ್ನು ನೋಡಿ ಅಳುವುದು ಹೀಗೆ ಸಾಗುತ್ತಿತ್ತು ನಮ್ಮ 'ಮಹಾ' ಭಾರತ. ಆಮೇಲೆ ನಮ್ಮ ಮನೆಗೂ ಬ್ಲಾಕ್ ಆ್ಯಂಡ್ ವೈಟ್ ಟಿವಿ ಬಂತು. ಟಿವಿ ಬಂದ ಮೊದಲ ದಿನ ಫುಲ್ ಚಾಲೂ. ಪ್ರೋಗ್ರಾಂ ಮುಗಿದು ಬಣ್ಣ ಬಣ್ಣದ ಸ್ಟೈಪ್ ಕಾಣಿಸಿಕೊಂಡರೂ ಅದನ್ನೇ ನೋಡುತ್ತಾ ಕುಳಿತಿರುತ್ತಿದ್ದೆವು. ರುಕಾವಟ್ ಕೆ ಲಿಯೆ ಕೇದ್ ಹೈ ಅಂದ್ರೆ ಏನೂ ಅಂತಾ ಗೊತ್ತಿಲ್ಲದಿದ್ದರೂ ಸ್ವಲ್ಪ ಸಮಯದ ನಂತರ ಪ್ರೋಗ್ರಾಂ ಬರುತ್ತೆ ಅಂತಾ ಗೊತ್ತಿತ್ತು. "ಟಿವಿ ಬಂತಾ...ಇನ್ನು ಮಕ್ಕಳು ಓದಲ್ಲ ಬಿಡಿ" ಅಂತಾ ಅಮ್ಮನಿಗೆ ಚಾಡಿ ಹೇಳುವ ನೆರೆಯವರು ಬೇರೆ. ಅಂತೂ ಟಿವಿಯ ಮೂಲಕ ಹಿಂದಿ ಬೇಗನೆ ಕಲಿತುಕೊಳ್ಳುವಂತಾಯಿ

'ಎಂಡೋ ನಿಷೇಧಿಸಿ' - ಶರದ್ ಪವಾರ್ ಗೊಂದು ಬಹಿರಂಗ ಪತ್ರ

ಶರದ್ ಪವಾರ್ ಜೀ, ನಮಸ್ತೆ. ಕೇಂದ್ರ ಕೃಷಿ ಮಂತ್ರಿಯಾಗಿದ್ದು ಕೊಂಡು ಭ್ರಷ್ಟಾಚಾರದ ಹೊದಿಕೆ ಹೊದ್ದು ಗಾಢ ನಿದ್ರೆಗೆ ಜಾರಿರುವ ನೀವು ಎಂದಾದರೂ ಸಾಮಾನ್ಯ ಜನರ ಬಗ್ಗೆ ಯೋಚಿಸಿದ್ದೀರಾ? ಹಣ ಕೂಡಿಡುವ ನಿಮ್ಮ ಕಾಯಕದ ನಡುವೆ ಒಂದಷ್ಟು ಹೊತ್ತು ವಿರಾಮ ಸಿಕ್ಕರೆ ಎಂಡೋಸಲ್ಫಾನ್ ಪೀಡಿತರ ಬಗ್ಗೆ ಒಮ್ಮೆ ದೃಷ್ಟಿ ಹಾಯಿಸಿ. ಕೇರಳದ ಪುಟ್ಟ ಜಿಲ್ಲೆಯಾದ ಕಾಸರಗೋಡಿನ ಎಣ್ಮಕಜೆ, ಬೋವಿಕ್ಕಾನ, ಪೆರ್ಲ, ಪೆರಿಯ ಮೊದಲಾದ ಊರುಗಳಲ್ಲಿ ಎಂಡೋಸಲ್ಫಾನ್ ಎಂಬ ವಿಷದಿಂದಾಗಿ ಪ್ರಾಣ ಕಳೆದುಕೊಂಡವರೆಷ್ಟು ಮಂದಿ? ಇನ್ನೂ ಜೀವಂತ ಶವವಾಗಿರುವವರು, ಅಂಗವೈಕಲ್ಯತೆಯಿಂದು ಬಳಲುತ್ತಿರುವ ಮಕ್ಕಳು ...ಇಲ್ಲೊಂದು ನರಕವಿದೆ. ಸಂಕಷ್ಟಕ್ಕೆ ಸಿಲುಕಿರುವ ಈ ಜನರ ಕೂಗು ನಿಮಗೆ ಕೇಳಿಸುತ್ತಿಲ್ಲವೇ? ಗೇರುಬೀಜದ ಮರಗಳಿಗೆ ಈ ವಿಷವನ್ನು ಸಿಂಪಡಿಸಿ ಜನರ ಬಾಳನ್ನು ನರಕವಾಗಿಸಿದ ಪ್ಲಾಂಟೇಷನ್ ಕಾರ್ಪರೇಷನ್ ಇದೀಗ ಮೌನ ವಹಿಸಿರುವುದು ಎಷ್ಟು ಸರಿ?. ಕಾಸರಗೋಡಿನ 11 ಪಂಚಾಯತುಗಳ ಜನರು ಎರಡು ದಶಕಗಳಿಂದ ಎಂಡೋ ಪೀಡೆಗೆ ಬಲಿಯಾಗುತ್ತಾ ಬಂದಿರುವುದು ನಿಮಗೆ ಕಾಣಿಸುವುದಿಲ್ಲವೇ? ಎಂಡೋ ಪೀಡಿತರ ಸಂಕಷ್ಟಗಳ ಬಗ್ಗೆ ದಿನ ನಿತ್ಯವೂ ಒಂದಲ್ಲ ಒಂದು ಸುದ್ದಿ ವರದಿಯಾಗುತ್ತಲೇ ಇದ್ದರೂ ನೀವು ಕಿವಿ, ಕಣ್ಣು ಮುಚ್ಚಿ ಕುಳಿದ್ದೀರಾ? 'ಎಂಡೋ' ವಿಷ ಎಂದು ಇಷ್ಟರವರೆಗೆ ಪ್ರೂವ್ ಆಗಿಲ್ಲ ಆದ್ದರಿಂದ ಎಂಡೋ ನಿಷೇಧ ಯಾಕೆ ಅಂತಾ ಕೇಳ್ತಿದ್ದೀರಲ್ಲಾ? ಎಂಡೋ ಪೀಡಿತ ಪ್ರದೇಶಗಳಿಗೊಮ್ಮೆ ಭೇಟಿ ನೀಡಿ ನೋಡಿ

ಈ ಮಳೆಯೇ ಹಾಗೆ...

ಈ ಮಳೆಯೇ ಹಾಗೆ... ನಮ್ಮೂರಿನ ಮಳೆಯಂತಿಲ್ಲ ಇದು ಮಳೆ ಬಂದ ಕೂಡಲೇ ಮಣ್ಣಿನ ವಾಸನೆ ಮೂಗನ್ನು ಮೆತ್ತಿ ಕೊಳ್ಳುವುದಿಲ್ಲ... ಈ ಮಳೆಯೇ ಹಾಗೆ... ಮನೆ ಬಿಟ್ಟು ಹೊರಗೆ ಕಾಲಿಡಲು ಬಿಡುವುದಿಲ್ಲ ಚರಂಡಿ ನೀರು ರೋಡಲ್ಲಿ ಹರಿದರೂ ನಾವ್ಯಾರು ತಲೆ ಕೆಡಿಸಿಕೊಂಡಂತ್ತಿಲ್ಲ ಈ ಮಳೆಯೇ ಹಾಗೆ... ಬಿರುಸಿನ ಮಳೆಗೆ ಕೊಡೆ ಹಾರುವುದಿಲ್ಲ ರೈನ್್ಕೋಟ್್ಗಳೆಡೆಯಲ್ಲಿ ಮಿಣುಕುವ ಕಣ್ಣುಗಳು ಲಿಫ್ಟ್ ಕೇಳಿದರೂ ಕೊಡುವುದಿಲ್ಲ ಈ ಮಳೆಯೇ ಹಾಗೆ... ಒಮ್ಮೆ ಪಿರಿ ಪಿರಿ, ಎಡೆ ಬಿಡದೆ ಸುರಿಯೆ ಕಿರಿಕಿರಿ ಕೆಂಪು ದೀಪದಡಿಯಲ್ಲಿ ವಿಷಣ್ಣನಾಗಿ ನಿಂತ ಗಾಡಿಗಳ ಗಾಲಿಗಳು ಮುಂದೆ ಚಲಿಸುವುದೇ ಇಲ್ಲ ಈ ಮಳೆಯೇ ಹಾಗೆ... ತಂಗಾಳಿಯೊಂದಿಗೆ ನೆನಪು ಹೊತ್ತು ತರುತಿದೆ ಕಳೆದ ಬಾಲ್ಯ, ಯೌವನದ ಮಿಡಿತ ತುಡಿತದೊಳು ಕಣ್ಣೀರಾಗಿ ಹರಿದು, ಮತ್ತೆ ಮೋಡವಾಗುತಿದೆ.

ಯುರೇಕಾ...ಯುರೇಕಾ

ನೋಡು..ಮಗು ಅಲ್ಲಿದೆ ಅಜ್ಜಿಮನೆ ಇನ್ನೊಂದು ಹೆಜ್ಜೆ ಅಷ್ಟೇ.. ಈಗ ನಡೆದದ್ದು 2 ಮೈಲಿಯಷ್ಟಾಗಿತ್ತು ಇನ್ನೂ ಸ್ವಲ್ಪ ದೂರ.. ಅಪ್ಪ ಮಗನನ್ನು ಪುಸಲಾಯಿಸಿ ಹೆಜ್ಜೆ ಹಾಕುತ್ತಿದ್ದ ಅಪ್ಪ.... ವರುಷ ಸರಿದಾಗ ಮನೆಯ ಮುಂದಿನ ಡಾಂಬರು ರೋಡಿನಲ್ಲಿ ಮಗ ಓಡಾಡಿದ ಮಗು ಓಡು, ಇನ್ನೂ ಜೋರಾಗಿ ಓಡು ಅಪ್ಪ ಹುರಿದುಂಬಿಸಿದ ಮಗ ಓಡುತ್ತಲೇ ಇದ್ದ ಇದು ಮ್ಯಾರಥಾನ್ ಅಲ್ಲ, ಕ್ರಾಸ್್ಕಂಟ್ರಿ ರೇಸ್ ಅಲ್ಲ... ಬದುಕ ಬಂಡಿಯನ್ನೆಳೆಯಲು ಅವ ಓಡುತ್ತಿದ್ದ ಮುದ್ದು ಗಲ್ಲದಲ್ಲಿ ಕಾಣಿಸಿತ್ತು ಗಡ್ಡ ಹೆಗಲ ಮೇಲಿತ್ತು ಕನಸುಗಳ ಭಾರ ಓಡು ಮಗು ಓಡು ಇನ್ನೂ ಓಡಬೇಕೆಂದ ಮುದಿ ಕೂದಲಿನ ಅಪ್ಪ... ಗಮ್ಯ ಸ್ಥಾನವೆಲ್ಲೋ ಯಾರಿಗೇನು ಗೊತ್ತು? ನಿನ್ನ ಮುಂದಿರುವ ಜನರ ಕಾಲೆಳೆದು ಹೊರದಬ್ಬು ಹಿಂದಿರುವ ಮಂದಿಯನ್ನು ಒದೆಕೊಟ್ಟು ತಳ್ಳು ಇಷ್ಟು ಸಾಕಾಗದಿದ್ದರೆ ಅವರ ಮನ ಚಿವುಟು ಅವರ ಕಣ್ಣೀರಲಿ ತೇಲುತ್ತಾ ನೀ ದಡವ ಸೇರು ಮಗ ಓಡುತ್ತಲೇ ಇದ್ದ ಪಿತೃ ವಾಕ್ಯ ಪಾಲಕನಂತೆ ಲಜ್ಜೆ ಬಿಡು ನೀನು...ಎಲ್ಲರಿಂದ ಮುಂದೆ ಸಾಗು ಕಿವಿ ಕೇಳಿಸದು, ಕಣ್ಣು ಕಾಣಿಸದು... ಲಜ್ಜೆ ಬಿಟ್ಟು ವಿವಸ್ತ್ರನಾಗಿ ಮಗ ಓಡುತ್ತಿದ್ದ ಜನ ನಕ್ಕಾಗ ಅಪ್ಪ ಹೇಳಿದ ಯುರೇಕಾ....ಯುರೇಕಾ...

ಉದಯೋನ್ಮುಖ ಬರಹಗಾರರಿಗೆ ಆಮಂತ್ರಣ

ನಾನು ಮತ್ತು ನನ್ನ ಗೆಳೆಯರು ಸೇರಿ ಉದಯೋನ್ಮುಖ ಬರಹಗಾರರನ್ನು ಒಂದು ಗೂಡಿಸುವ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳುತ್ತಿದ್ದೇವೆ. ಕಾರ್ಯಕ್ರಮದ ದಿನಾಂಕ ಮತ್ತು ಸ್ಥಳವನ್ನು ಆಮೇಲೆ ತಿಳಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ, ಭಾಷೆ, ಪ್ರಸ್ತುತ ಪರಿಸ್ಥಿತಿ, ಸವಾಲುಗಳು, ದೋಷಗಳು ಹೀಗೆ ಒಂದಷ್ಟು ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಇದು ಚರ್ಚಾಗೋಷ್ಠಿಯಲ್ಲ, ಸಮ್ಮೇಳನವೂ ಅಲ್ಲ. ಬದಲಾಗಿ ನಾವಿಲ್ಲಿ ಕೈಗೊಳ್ಳುವಂತಹ ತೀರ್ಮಾನಗಳು ಚಾಲ್ತಿಗೆ ಬರಬೇಕು. ನಾವು ಪ್ರಚಾರಕ್ಕಾಗಿ ಈ ಕಾರ್ಯಕ್ರಮವನ್ನು ಕೈಗೊಂಡಿಲ್ಲ. ಏನಿದ್ದರೂ ಇದು ಕನ್ನಡದ ಸೇವೆ, ಇದು ನಮ್ಮ ಭಾಷೆಗೆ ಸಲ್ಲಬೇಕು. ಇದಕ್ಕಾಗಿ ನಿಮ್ಮ ಸಹಕಾರ ಬೇಕು. ಕನ್ನಡಕ್ಕಾಗಿ ತುಡಿಯುವ ಮನ ನಿಮ್ಮದಾಗಿದ್ದರೆ ಬನ್ನಿ... ನಾವೆಲ್ಲರೂ ಒಟ್ಟಾಗಿ ಸೇರೋಣ.. ಪ್ರಸ್ತುತ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಮಾನದಂಡದಗಳು ಇಂತಿವೆ: 1. ಉದಯೋನ್ಮುಖ ಬರಹಗಾರರು (ಬರವಣಿಗೆಯಲ್ಲಿ ಆಸಕ್ತಿಯುಳ್ಳವರು) ಮಾತ್ರ 1. ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಜ್ಞಾನ 2. ಕನ್ನಡಕ್ಕಾಗಿ ತುಡಿಯುವ ಮನಸ್ಸು 3. ಪ್ರಸಕ್ತ ವಿದ್ಯಮಾನಗಳ ಬಗ್ಗೆ ಅರಿವು 5. ಭಾಗವಹಿಸಲಿಚ್ಛಿಸುವವರು ಈ ಕೆಳಗಿನ ಪ್ರಶ್ನೆಗೆ 100 ಪದಗಳಿಗೆ ಮೀರದಂತೆ ಉತ್ತರಿಸಬೇಕು. ಪ್ರಶ್ನೆ: ಸಾಹಿತ್ಯಕ್ಕೆ ಓದು ಅಗತ್ಯವೇ? ಸಾಹಿತಿ ಆದವನಿಗೆ ಸಾಮಾಜಿಕ ಬದ್ಧತೆಗಳಿರಬೇಕೆ? ನಿಮ್ಮ ಉತ್ತರವನ್ನು ಏಪ್ರಿಲ್ 25ರ ಮೊದಲು sanakabrahma@gmail.com

ಅಪ್ಪನ ಮನದಲ್ಲೊಮ್ಮೆ ಇಣುಕಿ...

ಮ ಗಳು ದೊಡ್ಡವಳಾಗುವುದನ್ನು ನೋಡಿದರೆ ಯಾವ ಅಪ್ಪನಿಗೆ ಖುಷಿಯಾಗಲ್ಲ ಹೇಳಿ? ಅವಳಿಡುವ ಪುಟ್ಟ ಹೆಜ್ಜೆಯ ಗೆಜ್ಜೆ ನಾದ ಅಪ್ಪನ ಮನಸ್ಸಿನ ದನಿಯಾಗುತ್ತದೆ. ಪೀ....ಪೀ...ಸದ್ದು ಹೊರಡಿಸುವ, ಹೆಜ್ಜೆಯಿಟ್ಟಾಗ ಲೈಟ್ ಹೊತ್ತಿಕೊಳ್ಳುವ ಆ ಚಿಕ್ಕ ಬೂಟಿನ ಸದ್ದಿಗೆ ಅವ ನಗುತ್ತಾನೆ. ಎರಡು ಜಡೆಯಲ್ಲೂ ಮಲ್ಲಿಗೆ ಮುಡಿದು, ಬಣ್ಣ ಬಣ್ಣದ ಫ್ರಾಕ್ ಹಾಕಿಕೊಂಡು ಅಪ್ಪನ ಕಿರುಬೆರಳು ಹಿಡಿದು ನಡೆಯುವ ಮಗಳು ಈವಾಗ ಕೂದಲು ಹರಡಿ ಬಿಟ್ಟು ಸುಯ್ಯಿ ಅಂತಾ ಸ್ಕೂಟಿಯೇರುತ್ತಾಳೆ. ಕೈ ತುಂಬಾ ಬಳೆ ಬೇಕು ಎಂದು ಹಠ ಹಿಡಿಯುತ್ತಿದ್ದ ಪೋರಿ ಈಗ ರಟ್ಟೆಯಲ್ಲಿ ಟ್ಯಾಟೂ ಹಾಕಿಸಿ ಸ್ಲೀವ್ ಲೆಸ್ ಟೀಶರ್ಟ್ ಹಾಕ್ತಾಳೆ. ಅವಳ ಹೈ ಹೀಲ್ಡ್ ಶೂವಿನ ಟಕ್ ಟಕ್ ಸದ್ದು ಮಹಡಿಯವರೆಗೂ ಕೇಳಿಸುತ್ತದೆ. ಅಪ್ಪನ ಜತೆ ಕುಳಿತು ಬಟ್ಟಲಿಗೆ ಕೈ ಹಾಕಿ ದೋಸೆ ತಿನ್ನುತ್ತಿದ್ದ ಮಗಳು ಡಯಟ್ ಅಂತಾ ಕ್ಯಾರೆಟ್ ಜೂಸ್ ಕುಡಿದು ಹೊಟ್ಟೆ ತುಂಬುತ್ತಾಳೆ. ಮಗಳು ಬದಲಾಗಿದ್ದಾಳೆ. ಕಾಲಕ್ಕೆ ತಕ್ಕಂತೆ ಅವಳು ಜೀವನದಲ್ಲಿ ಬಣ್ಣ ತುಂಬಿಕೊಂಡಿದ್ದಾಳೆ. ದಿನಪತ್ರಿಕೆ ಕೈಯಲ್ಲಿ ಹಿಡಿದು ನಿತ್ಯ ಭವಿಷ್ಯ ಪುಟ ತಿರುವಿದರೂ, ಮಗಳ ಭವಿಷ್ಯದ ಬಗ್ಗೆ ಅಪ್ಪ ಚಿಂತೆಯಲ್ಲಿ ಮುಳುಗುತ್ತಾನೆ. ಅವನ ಕಣ್ಣುಗಳು ಮಸುಕಾದರೂ ಮನಸ್ಸಿನ ದೃಷ್ಟಿ ಶುಭ್ರವಾಗಿದೆ. ರಂಗು ಕಾಣದ ಕೂದಲುಗಳಲ್ಲಿ, ಸುಕ್ಕುಗಟ್ಟಿದ ಚರ್ಮದಲ್ಲಿ ಬದುಕಿನ ಕಪ್ಪು ಬಿಳುಪು ಚಿತ್ರಗಳ ಛಾಯೆಯಿದೆ. ಕಲರ್್ಫುಲ್ ಬದುಕಿನಲ್ಲಿ ಓಡಾಡುವ ಮಗಳ ಹಾದಿಯನ್ನೇ ನೋಡುತ್ತಾ ಅಪ್

ಹಳೇ ನಿದ್ರೆ ಪುರಾಣ...

ಇ ತ್ತೀಚೆಗೆ ಬ್ಲಾಗ್ ಬರೆಯೋದು ಕಡಿಮೆ ಆಗಿದೆ. ಕೆಲಸದ ಒತ್ತಡ, ಸಮಯದ ಅಭಾವ ಮತ್ತೊಮ್ಮೆ ಮೂಡ್ ಇಲ್ಲ ಹೀಗೆ ಹಲವಾರು ಕಾರಣಗಳಿಂದ ಬ್ಲಾಗ್ ಬರವಣಿಗೆ ನಿಂತುಹೋಗಿದೆ. ಏನಾದರೂ ಬರೆಯೋಣ ಎಂದು ಕೂತರೆ ವಿಷಯಗಳೇ ಸಿಗಲ್ಲ. ಈ ವಿಷಯಗಳೇ ಹಾಗೇ...ಏನಾದರೂ ಕೆಲಸ ಮಾಡುವಾಗ ಬ್ಲಾಗ್ ಬರೆಯೋಣ ಅಂತಾ ಅನಿಸುತ್ತೆ. ಟಾಯ್ಲೆಟ್್ನಲ್ಲೇ ಹೆಚ್ಚಿನ ವಿಷಯಗಳು ನೆನಪಿಗೆ ಬರುತ್ತೆ, ಆಮೇಲೆ ಬಂದು ಬರೆಯೋಣ ಎಂದು ಕೂತರೇ ಪದಗಳೇ ಸಿಗದು. ಕೆಲವೊಮ್ಮೆ ಬರೆಯಲು ವಿಷಯಗಳು ಸುಮಾರು ಇರುತ್ತದೆ, ಇವುಗಳಲ್ಲಿ ಯಾವುದನ್ನು ಬರೆಯಲಿ? ಎಂಬುದೇ ದೊಡ್ಡ ಪ್ರಶ್ನೆಯಾಗಿ ಕಾಡುವುದೂ ಉಂಟು. ಅಂತೂ ಬ್ಲಾಗ್್ಗೆ ಏನು ಬರೆಯಲಿ? ಎಂಬ ಚಿಂತೆಯಿಂದ ಮುಕ್ತಳಾಗಲು ಅಪ್ಪನಿಗೆ ಫೋನಾಯಿಸಿ, ಏನಾದರೂ ವಿಷಯ ಹೇಳಿ ಅಂದೆ. ನಿನಗಿಷ್ಟವಿರುವ ವಿಷಯದ ಬಗ್ಗೆ ಬರಿ..ಅಂದ್ರು. ಆಮೇಲೆ ನನಗಿಷ್ಟವಿರುವ ವಿಷಯಗಳನ್ನು ಪಟ್ಟಿ ಮಾಡತೊಡಗಿದೆ. ಅರೇ..ವಿಷಯ ಸಿಕ್ಕಿತು.. ನಿದ್ದೆ! ನಿದ್ದೆ ಯಾರಿಗೆ ಇಷ್ಟ ಇಲ್ಲ ಹೇಳಿ? ನಮ್ಮ ದೇವೇಗೌಡ್ರನ್ನು ನೋಡಿ...ಇನ್ನು ವಿಧಾನಸಭೆ, ಲೋಕ ಸಭಾ ಕಲಾಪದ ನಡುವೆ ಗಡದ್ದಾಗಿ ನಿದ್ದೆ ಹೋಗುವ ಮಂದಿಯನ್ನಂತೂ ನಾವು ನೋಡಿಯೇ ಇರುತ್ತೇವೆ. ನಿದ್ದೆ ಅದೊಂದು ಸುಖ, ಭಾಗ್ಯ...ಅದು ಎಲ್ಲರಿಗೂ ಒಲಿಯುವುದಿಲ್ಲ. ನನಗಂತೂ ನಿದ್ದೆ ಅಂದ್ರೆ ಸಿಕ್ಕಾಪಟ್ಟೆ ಇಷ್ಟ ಕಣ್ರೀ..ನಾನು ಪಾಪುವಾಗಿದ್ದಾಗ ನಿದ್ದೆ ಮಾಡ್ತಾನೇ ಇರ್ತಿಲ್ವಂತೆ. ಹಾಗಂತ ರಾತ್ರಿ ವೇಳೆ ರಂಪಾಟ ಮಾಡಿ ಅಮ್ಮನ ನಿದ್ದೆಯನ್ನೂ ಕೆಡಿಸ

ಆಕೆ 'ಸ್ವಬಂಧನ'ದಿಂದ ಮುಕ್ತವಾಗಲಿ...

ದಿ ನವಿಡೀ ಕೀಲಿಮಣೆ ಕುಟ್ಟುತ್ತಾ ಡೆಡ್್ಲೈನ್ ಎಂಬ ಭೂತಕ್ಕೆ ಭಯ ಪಡುತ್ತಾ ನನ್ನ ದಿನಚರಿ ಮುಗಿಯತ್ತೆ. ಇಂದು ಮಹಿಳಾ ದಿನಾಚರಣೆ ಅದಕ್ಕೆ ಏನಾದರೂ ಗೀಚೋಣ ಎಂದು ಕುಳಿತಾಗ ಹೊಳೆದ ಕೆಲವೊಂದು ವಿಚಾರಗಳಿಗೆ ಅಕ್ಷರ ರೂಪ ಕೊಡುವ ಪ್ರಯತ್ನ ಇದು. ಮಹಿಳಾ ದಿನಾಚರಣೆ ಎಂದ ಕೂಡಲೇ ಮಹಿಳೆಯ ಬಗ್ಗೆ ಬರೆಯಬೇಕಲ್ವಾ. ಇರಲಿ, ಮಹಿಳೆಯ ಬಗ್ಗೆ ಓದುವಾಗ ನಾನು ಗಮನಿಸಿದ್ದು ಅದರಲ್ಲಿ ಹೆಚ್ಚಾಗಿ ಸ್ತ್ರೀ ಶೋಷಣೆಯ ಬಗ್ಗೆಯೇ ಪುಟಗಟ್ಟಲೆ ವಿವರಣೆ ನೀಡಲಾಗುತ್ತದೆ. ಯಾವುದೇ ಮಹಿಳಾ ವಿಚಾರಗೋಷ್ಠಿಗೆ ಹೋಗಿ, ಅಲ್ಲಿ ಕೇಳುವುದೇ ಅಂದಿನ ಕಾಲದಿಂದ ಇಂದಿನ ಕಾಲದ ವರೆಗೆ ಪುರುಷರು ದಬ್ಬಾಳಿಕೆ ನಡೆಸುತ್ತಾ ಇದ್ದಾರೆ. ಪುರುಷರು ಹಾಗೆ ಮಾಡಿದ್ರು, ಹೀಗೆ ಮಾಡಿದ್ರು... ಸ್ತ್ರೀ ಶೋಷಣೆ!... ಸ್ತ್ರೀ ಎಂಬ ಪದ ಹೆಡ್್ಲೈನ್ ಆಗಿದ್ದರೆ ಅಲ್ಲಿ ಶೋಷಣೆ ಕಿಕ್ಕರ್. ಹಾಗಂತ ಇಂದಿನ ಕಾಲದಲ್ಲಿ ಸ್ತ್ರೀ ಶೋಷಣೆ ನಡೆಯುತ್ತಿಲ್ಲ ಎಂದು ನಾನು ಹೇಳಲ್ಲ. ಶೋಷಣೆ, ದಬ್ಬಾಳಿಕೆಗಳಿಗೆ ಎಂದೂ ಬ್ರೇಕ್ ಬಿದ್ದಿಲ್ಲ. ಆದರೆ ಬೇಜಾರಿನ ವಿಷ್ಯ ಏನಪ್ಪಾ ಅಂದ್ರೆ ಇಂತಹಾ ಕಥೆಗಳನ್ನು ಹೇಳುತ್ತಾ ಕೆಲವರು ತಮ್ಮನ್ನು ತಾವೇ ಸ್ತ್ರೀವಾದಿ ಎಂದು ಬಿಂಬಿಸಿಕೊಳ್ಳುತ್ತಾರೆ. ನಿಜ ಹೇಳಬೇಕಾದ್ರೆ ಓರ್ವ 'ಸ್ತ್ರೀವಾದಿ' ಎಂದರೆ ಪುರುಷರನ್ನು ದೂರುವ ಮೂಲಕ, ಆತನನ್ನು ಜರೆಯುವ ಮೂಲಕ ಸ್ತ್ರೀಯನ್ನೇ ಹೊಗಳುವ ಮೂಲಕ ಪಟ್ಟಗಿಟ್ಟಿಸಿಕೊಳ್ಳುವುದಲ್ಲ. ದಬ್ಬಾಳಿಕೆ ಮಹಿಳೆಯಿಂದಲೂ ಆಗಲ್ವಾ? ವರದಕ್ಷಿಣೆ ವಿಷಯದಲ್

ಬಚ್ಚಿಡಲು ಬರುವುದಿಲ್ಲ...

ಬ ಚ್ಚಿಡಲು ಬರುವುದಿಲ್ಲ ನನಗೆ ಹಳೆಯ ಕಹಿ ನೆನಪುಗಳ ಮನದ ಕೋಣೆಗೆ ಸದ್ದಿಲ್ಲದೆ ಬರುವ ಆ ಕೆಟ್ಟ ಕನಸುಗಳ... ಮುಚ್ಚಿಡಲು ಬರುವುದಿಲ್ಲ ಒತ್ತರಿಸುವ ಕಂಬನಿಯ ಕಷ್ಟಗಳ ಸರಮಾಲೆಗಳ ನಡುವೆ ಬರುವ ಇಷ್ಟಗಳ ಸಿಂಚನವ.... ಸುಮ್ಮನಿರುವುದಿಲ್ಲ ಮನಸು ಇಂದು ನಾಳಿನ ಚಿಂತೆಯಲಿ ವರ್ತಮಾನದ ಬೇಗುದಿಯಿದೆ ಉಸಿರಾಡುವ ಜೀವದಲಿ ಮರೆಯಲಾಗುವುದಿಲ್ಲ ಅತ್ತರೂ ನೋವು ನಲಿವಿನ ದಿನಗಳ ತೊರೆದು ಹೋಗಲಾರೆನು ಬದುಕು ನಾನಷ್ಟು ಹೇಡಿಯಲ್ಲ! ಸೋಲುವುದಿಲ್ಲ...ದೂರುವುದಿಲ್ಲ ಯಾರು ಏನೇ ಬಗೆದರೂ ಈ ಕ್ಷಣವು ಕ್ಷಣಿಕ ಎನ್ನುತಿರೆ ಮನ ಮತ್ತೆ ನಡೆವೆನು ಹೊಸ ಛಲದಲಿ.

ಕರ್ನಾಟಕ ಸರ್ಕಾರ ಯಾಕೆ 'ಥಿಂಕ್' ಮಾಡಲ್ಲ?

ಕ ರ್ನಾಟಕದಲ್ಲಿ 'ಪವರ್' ಸಮಸ್ಯೆ ಇದ್ದದ್ದೇ. (ರಾಜಕಾರಣಿಗಳ ಪವರ್ ಅಲ್ಲ !).ಒಂದು ದಿನ ನೀರು ಇದ್ದರೆ ಇನ್ನೊಂದಿನ ಪವರ್ ಇಲ್ಲ. ರಾಜ್ಯಕ್ಕೆ ವಿದ್ಯುತ್ ಸಾಕಾಗ್ತಾ ಇಲ್ಲ ಎಂಬುದು ಮಂತ್ರಿವರ್ಯರ ವರಸೆ. ಬುರುಡೆ ಬಲ್ಬ್ ಬೇಡ ಎಂದು ಸರ್ಕಾರ ಹೇಳಿದ್ದೂ ಆಯ್ತು. ಅದೂ ಬುರುಡೆ ಬಿಟ್ಟದ್ದೋ ಅಂತಾ ಗೊತ್ತಿಲ್ಲ :) ಅಲ್ಲಾ ಮಾರಾಯ್ರೆ ... ಏನೇ ಹೇಳಿ ಬುರುಡೆ ಅಥವಾ ಇನ್ಯಾವುದೇ ಬಲ್ಬ್ ಉರಿಯಲು ವಿದ್ಯುತ್ ಬೇಕಲ್ವಾ? ವಿದ್ಯುತ್ ಇಲ್ಲದಿದ್ದರೆ ಬಲ್ಬ್ ವಿಷ್ಯ ಯಾಕೆ ಬೇಕು? ಕರ್ನಾಟಕದಲ್ಲಿ ವಿದ್ಯುತ್್ನ ಕೊರತೆ ಇದೆ ಎಂಬುದನ್ನು ಒಪ್ಪಿಕೊಳ್ತೀನಿ. ಆದರೆ ಆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಯಾಕೆ ವಿಫಲವಾಗುತ್ತಿದೆ? (ರಾಜ್ಯದ ರಾಜಕೀಯ ಡೊಂಬರಾಟ ವಿದ್ಯುತ್ತಿಗೇ 'ಶಾಕ್್' ನೀಡಿದೆಯೇ ಎಂಬುದು ನನ್ನ ಅನುಮಾನ) ಸದ್ಯ ಈ ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಸರ್ಕಾರ ಸೌರಶಕ್ತಿಯ ಮೊರೆ ಯಾಕೆ ಹೋಗಬಾರದು? ಇಲ್ಲಿ ಲಭ್ಯವಾಗುವಂತಹ ಸೌರಶಕ್ತಿಯನ್ನು ಸದುಪಯೋಗಿಸಿಕೊಂಡರೆ ರಾಜ್ಯಕ್ಕೆ ಬೇಕಾದಷ್ಟು ವಿದ್ಯುತ್ತನ್ನು ಪಡೆಯಬಹುದು ಎಂಬ ಯೋಚನೆ ಸರ್ಕಾರಕ್ಕೆ ಹೊಳೆದಿಲ್ಲವೇ? ಇಲ್ಲಿರುವ ಕಟ್ಟಡಗಳ ಮೇಲೆ ಸೋಲಾರ್ ಪೇನಲ್ ಹಾಕಿಸಿದ್ರೆ ಕನಿಷ್ಠ ನಿತ್ಯೋಪಯೋಗಿ ವಿದ್ಯುತ್ ಪಡೆಯಬಹುದು ಎಂಬುದರ ಬಗ್ಗೆ ಜನರು ಯಾಕೆ ಯೋಚನೆ ಮಾಡಲ್ಲ? ಇನ್ನು ನೀರಿನ ಸಮಸ್ಯೆ, ಮಳೆ ನೀರು ಅದೆಷ್ಟು ಪೋಲಾಗುತ್ತಿದೆ? ಇಲ್ಲಿ ಯಾರು ಮಳೆ ನೀರು ಸಂಗ್ರಹದತ್ತ