Posts

Showing posts with the label ಮಂಗಳೂರು

ಹೆಣ್ಮಕ್ಕಳಿಗೆ ಕಪಾಳಮೋಕ್ಷ ಮಾಡುವಾಗ ಇವರಿಗೆ 'ಭಾರತೀಯ ಸಂಸ್ಕೃತಿ' ನೆನಪಿಗೆ ಬರಲಿಲ್ಲವೇ?

ಆ ಧುನಿಕ ದುಶ್ಯಾಸನರು! ಹೌದು. ಇವರನ್ನು ದುಶ್ಯಾಸನರು ಎಂದು ಕರೆದರೂ ಸಾಲುವುದಿಲ್ಲ. ಯಾಕೆಂದರೆ ದುಶ್ಯಾಸನ ದ್ರೌಪದಿಯ ಸೀರೆಯನ್ನು ಎಳೆಯುತ್ತಲೇ ಸುಸ್ತಾಗುತ್ತಾನೆ. ಇವರು ಹಾಗಲ್ಲ ಹೆಣ್ಮಕ್ಕಳ ಕಪಾಳಕ್ಕೆ ಹೊಡೆದು ಅವರ ಮೈಮೇಲೆ ಕೈಯಾಡಿಸುತ್ತಾರೆ. ಅಲ್ಲಿದ್ದ ಹುಡುಗನೊಬ್ಬ 'ಇನಿ ಎನ್ನ ಬರ್ತ್ ಡೇಯೇ...ಹಾಕೊಡ್ಚಿ' (ಇವತ್ತು ನನ್ನ ಹುಟ್ಟುಹಬ್ಬ, ಹೊಡಿಯಬೇಡಿ) ಎಂದು ಪರಿಪರಿಯಾಗಿ ಬೇಡಿಕೊಳ್ಳುತ್ತಿದ್ದರೂ ಅವನನ್ನು ಅರೆಬೆತ್ತಲೆಯಾಗಿಸಿ ಥಳಿಸುತ್ತಾರೆ. ಹೆಣ್ಮಕ್ಕಳನ್ನು ಹಿಡಿದು, ಗುದ್ದಿ, ದೂಡಿ ಮಂಚಕ್ಕೆ ನೂಕಲಾಗುತ್ತದೆ. ಅದರಲ್ಲಿ ಹುಡುಗಿಯೊಬ್ಬಳ ಕೆನ್ನೆಗೆ 'ಚಟಾರ್್' ಎಂದು ಬಿದ್ದ ಏಟಿನಿಂದ ಆಕೆ ಮಂಚದ ಮೇಲೆ ದೊಪ್ಪನೆ ಬೀಳುತ್ತಾಳೆ. ಅಲ್ಲಿದ್ದ ಯುವಕ ಯುವತಿಯರು ಮುಖ ಮುಚ್ಚಿಕೊಳ್ಳುತ್ತಿದ್ದಂತೆ ಬಲವಂತವಾಗಿ ಅವರ ಕೈ ಹಿಡಿದು ಎಳೆಯುತ್ತಾ, ಹುಡುಗಿ ದೇಹದ ಮುಟ್ಟಬಾರದ ಜಾಗದಲ್ಲೆಲ್ಲಾ ಹಿಡಿದು ಅವರನ್ನು ತಳ್ಳಲಾಗುತ್ತದೆ. ಇದು ಮಂಗಳೂರಿನ ಹೊರವಲಯ ಪಡೀಲ್್ನ ಬಡ್ಲಗುಡ್ಡೆಯಲ್ಲಿರುವ 'ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ' ಮೇಲೆ ಶನಿವಾರ ರಾತ್ರಿ ನಡೆದ 'ನೈತಿಕ ಪೊಲೀಸ್್' ಪುಂಡಾಟಿಕೆಯ ಝಲಕ್. ಈ ಮೊದಲು ಅಂದ್ರೆ 2009 ಜನವರಿ 24ರಂದು ಮಂಗಳೂರಿನ ಪಬ್ ಒಂದರ ಮೇಲೆ ಇದೇ ರೀತಿ ದಾಳಿ ನಡೆಸಲಾಗಿತ್ತು. ಆದರೆ ಶನಿವಾರ ನಡೆದದ್ದು? ಇಲ್ಲಿನ ಹೋಂ ಸ್ಟೇನಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದಾರೆ ಎಂದು ದಾಳಿ ನಡೆಸಲಾಗ...